ರಾಷ್ಟ್ರೀಯ

ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸರ್ಕಾರ ಈಗ ಗೃಹಬಳಕೆಯ ಅನಿಲ ಸಿಲಿಂಡರ್ ಗಳಿಗೆ ಕೋಟಾವನ್ನು ನಿಗದಿಪಡಿಸಿದೆ. ಆದರೆ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಅಗತ್ಯವಿದ್ದರೆ ದಾಖಲೆ ತೋರಿಸಬೇಕಾಗುತ್ತದೆ.  ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು ಈಗ ವರ್ಷಕ್ಕೆ 15 ಬಾರಿ ಮಾತ್ರ ಗ್ಯಾಸ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಲು ಸಾಧ್ಯವಾಗುತ್ತದೆ.  ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕು.

Advertisement
Advertisement

ಒಂದು ವರ್ಷದಲ್ಲಿ 15 ಸಿಲಿಂಡರ್‌ಗಳ ರೀ ಫಿಲ್ಲಿಂಗ್ ನಿಗದಿಪಡಿಸಲಾಗಿದೆ., ಆದರೆ ಯಾರಾದರೂ ಹೆಚ್ಚಿನ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಬಯಸಿದರೆ ಅದರ ಮೇಲೆ ಯಾವುದೇ ನಿರ್ಬಂಧವಿರುವುದಿಲ್ಲ. ಇದಕ್ಕೆ ದಾಖಲೆಗಳನ್ನು ತೋರಿಸಬೇಕು. ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕಾಗುತ್ತದೆ.

ಹೊಸ ನಿಯಮದ ಪ್ರಕಾರ ವರ್ಷದಲ್ಲಿ ಕೇವಲ 15 ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು ಎಂದು ಹೇಳಲಾಗಿದೆ, ಆದರೆ ಹೊಸ ನಿಯಮ ಅನ್ವಯಿಸಿದರೆ, ವರ್ಷದಲ್ಲಿ ಪ್ರತಿ ಪ್ರಕಾರದ ಒಟ್ಟು 15 ಗ್ಯಾಸ್ ಸಿಲಿಂಡರ್ ಅನ್ನು ಮಾತ್ರ ಬುಕ್ ಮಾಡಬಹುದು. ಸದ್ಯಕ್ಕೆ ಸಬ್ಸಿಡಿ ರಹಿತ ಸಿಲಿಂಡರ್‌ಗಳಿಗೆ ಯಾವುದೇ ಕೋಟಾ ನಿಗದಿಯಾಗಿಲ್ಲ. ಸಿಲಿಂಡರ್ ಮೇಲೆ ಸಬ್ಸಿಡಿ ತೆಗೆದುಕೊಳ್ಳದವರು ಎಷ್ಟು ಬೇಕಾದರೂ ಸಿಲಿಂಡರ್ ತೆಗೆದುಕೊಳ್ಳಬಹುದು. ಆದರೆ ಹೊಸ ನಿಯಮ ಜಾರಿಯಾದ ನಂತರ ಒಂದು ವರ್ಷದಲ್ಲಿ 15 ಸಿಲಿಂಡರ್ ಬುಕ್ಕಿಂಗ್ ಮಾಡಬಹುದಾಗಿದೆ. ಹೆಚ್ಚುವರಿ ಸಿಲಿಂಡರ್‌ಗಳನ್ನು ಯಾವ ಅಗತ್ಯಕ್ಕೆ ಕಾಯ್ದಿರಿಸಲಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಕೆಲವು ದಾಖಲೆಗಳನ್ನು ಸಹ ನೀಡಬೇಕಾಗಬಹುದು. ಪಡಿತರ ಚೀಟಿ, ಕುಟುಂಬದ ಸಂಖ್ಯೆ ಮುಂತಾದ ವಿವರಗಳ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ದಾಖಲೆಗಳನ್ನು ವಿತರಕರಿಗೆ ಸಲ್ಲಿಸಬೇಕು ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ ಮತ್ತು ಸಿಲಿಂಡರ್ ನೀಡುತ್ತಾರೆ. ಕಾಳಸಂತೆ ತಡೆಯಲು ಹಾಗೂ ಬಡವರಿಗೆ ಸಕಾಲಕ್ಕೆ ಸಿಲಿಂಡರ್‌ಗಳನ್ನು ಪೂರೈಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇಲಾಖೆಯ ಮಾಹಿತಿ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

6 hours ago

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು…

6 hours ago

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…

6 hours ago

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ…

6 hours ago

ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಉಪಲೋಕಾಯುಕ್ತರು ಸೂಚನೆ

ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಅಗಿಲೆಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ…

6 hours ago

ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾಣಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕ,…

7 hours ago