ರಾಷ್ಟ್ರೀಯ

ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸರ್ಕಾರ ಈಗ ಗೃಹಬಳಕೆಯ ಅನಿಲ ಸಿಲಿಂಡರ್ ಗಳಿಗೆ ಕೋಟಾವನ್ನು ನಿಗದಿಪಡಿಸಿದೆ. ಆದರೆ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಅಗತ್ಯವಿದ್ದರೆ ದಾಖಲೆ ತೋರಿಸಬೇಕಾಗುತ್ತದೆ.  ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು ಈಗ ವರ್ಷಕ್ಕೆ 15 ಬಾರಿ ಮಾತ್ರ ಗ್ಯಾಸ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಲು ಸಾಧ್ಯವಾಗುತ್ತದೆ.  ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕು.

Advertisement

ಒಂದು ವರ್ಷದಲ್ಲಿ 15 ಸಿಲಿಂಡರ್‌ಗಳ ರೀ ಫಿಲ್ಲಿಂಗ್ ನಿಗದಿಪಡಿಸಲಾಗಿದೆ., ಆದರೆ ಯಾರಾದರೂ ಹೆಚ್ಚಿನ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಬಯಸಿದರೆ ಅದರ ಮೇಲೆ ಯಾವುದೇ ನಿರ್ಬಂಧವಿರುವುದಿಲ್ಲ. ಇದಕ್ಕೆ ದಾಖಲೆಗಳನ್ನು ತೋರಿಸಬೇಕು. ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕಾಗುತ್ತದೆ.

ಹೊಸ ನಿಯಮದ ಪ್ರಕಾರ ವರ್ಷದಲ್ಲಿ ಕೇವಲ 15 ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು ಎಂದು ಹೇಳಲಾಗಿದೆ, ಆದರೆ ಹೊಸ ನಿಯಮ ಅನ್ವಯಿಸಿದರೆ, ವರ್ಷದಲ್ಲಿ ಪ್ರತಿ ಪ್ರಕಾರದ ಒಟ್ಟು 15 ಗ್ಯಾಸ್ ಸಿಲಿಂಡರ್ ಅನ್ನು ಮಾತ್ರ ಬುಕ್ ಮಾಡಬಹುದು. ಸದ್ಯಕ್ಕೆ ಸಬ್ಸಿಡಿ ರಹಿತ ಸಿಲಿಂಡರ್‌ಗಳಿಗೆ ಯಾವುದೇ ಕೋಟಾ ನಿಗದಿಯಾಗಿಲ್ಲ. ಸಿಲಿಂಡರ್ ಮೇಲೆ ಸಬ್ಸಿಡಿ ತೆಗೆದುಕೊಳ್ಳದವರು ಎಷ್ಟು ಬೇಕಾದರೂ ಸಿಲಿಂಡರ್ ತೆಗೆದುಕೊಳ್ಳಬಹುದು. ಆದರೆ ಹೊಸ ನಿಯಮ ಜಾರಿಯಾದ ನಂತರ ಒಂದು ವರ್ಷದಲ್ಲಿ 15 ಸಿಲಿಂಡರ್ ಬುಕ್ಕಿಂಗ್ ಮಾಡಬಹುದಾಗಿದೆ. ಹೆಚ್ಚುವರಿ ಸಿಲಿಂಡರ್‌ಗಳನ್ನು ಯಾವ ಅಗತ್ಯಕ್ಕೆ ಕಾಯ್ದಿರಿಸಲಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಕೆಲವು ದಾಖಲೆಗಳನ್ನು ಸಹ ನೀಡಬೇಕಾಗಬಹುದು. ಪಡಿತರ ಚೀಟಿ, ಕುಟುಂಬದ ಸಂಖ್ಯೆ ಮುಂತಾದ ವಿವರಗಳ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ದಾಖಲೆಗಳನ್ನು ವಿತರಕರಿಗೆ ಸಲ್ಲಿಸಬೇಕು ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ ಮತ್ತು ಸಿಲಿಂಡರ್ ನೀಡುತ್ತಾರೆ. ಕಾಳಸಂತೆ ತಡೆಯಲು ಹಾಗೂ ಬಡವರಿಗೆ ಸಕಾಲಕ್ಕೆ ಸಿಲಿಂಡರ್‌ಗಳನ್ನು ಪೂರೈಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇಲಾಖೆಯ ಮಾಹಿತಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

1 hour ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

2 hours ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

2 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

2 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

2 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

3 hours ago