Advertisement
ರಾಷ್ಟ್ರೀಯ

ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

Share

ಸರ್ಕಾರ ಈಗ ಗೃಹಬಳಕೆಯ ಅನಿಲ ಸಿಲಿಂಡರ್ ಗಳಿಗೆ ಕೋಟಾವನ್ನು ನಿಗದಿಪಡಿಸಿದೆ. ಆದರೆ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಅಗತ್ಯವಿದ್ದರೆ ದಾಖಲೆ ತೋರಿಸಬೇಕಾಗುತ್ತದೆ.  ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು ಈಗ ವರ್ಷಕ್ಕೆ 15 ಬಾರಿ ಮಾತ್ರ ಗ್ಯಾಸ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಲು ಸಾಧ್ಯವಾಗುತ್ತದೆ.  ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕು.

ಒಂದು ವರ್ಷದಲ್ಲಿ 15 ಸಿಲಿಂಡರ್‌ಗಳ ರೀ ಫಿಲ್ಲಿಂಗ್ ನಿಗದಿಪಡಿಸಲಾಗಿದೆ., ಆದರೆ ಯಾರಾದರೂ ಹೆಚ್ಚಿನ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಬಯಸಿದರೆ ಅದರ ಮೇಲೆ ಯಾವುದೇ ನಿರ್ಬಂಧವಿರುವುದಿಲ್ಲ. ಇದಕ್ಕೆ ದಾಖಲೆಗಳನ್ನು ತೋರಿಸಬೇಕು. ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕಾಗುತ್ತದೆ.

ಹೊಸ ನಿಯಮದ ಪ್ರಕಾರ ವರ್ಷದಲ್ಲಿ ಕೇವಲ 15 ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು ಎಂದು ಹೇಳಲಾಗಿದೆ, ಆದರೆ ಹೊಸ ನಿಯಮ ಅನ್ವಯಿಸಿದರೆ, ವರ್ಷದಲ್ಲಿ ಪ್ರತಿ ಪ್ರಕಾರದ ಒಟ್ಟು 15 ಗ್ಯಾಸ್ ಸಿಲಿಂಡರ್ ಅನ್ನು ಮಾತ್ರ ಬುಕ್ ಮಾಡಬಹುದು. ಸದ್ಯಕ್ಕೆ ಸಬ್ಸಿಡಿ ರಹಿತ ಸಿಲಿಂಡರ್‌ಗಳಿಗೆ ಯಾವುದೇ ಕೋಟಾ ನಿಗದಿಯಾಗಿಲ್ಲ. ಸಿಲಿಂಡರ್ ಮೇಲೆ ಸಬ್ಸಿಡಿ ತೆಗೆದುಕೊಳ್ಳದವರು ಎಷ್ಟು ಬೇಕಾದರೂ ಸಿಲಿಂಡರ್ ತೆಗೆದುಕೊಳ್ಳಬಹುದು. ಆದರೆ ಹೊಸ ನಿಯಮ ಜಾರಿಯಾದ ನಂತರ ಒಂದು ವರ್ಷದಲ್ಲಿ 15 ಸಿಲಿಂಡರ್ ಬುಕ್ಕಿಂಗ್ ಮಾಡಬಹುದಾಗಿದೆ. ಹೆಚ್ಚುವರಿ ಸಿಲಿಂಡರ್‌ಗಳನ್ನು ಯಾವ ಅಗತ್ಯಕ್ಕೆ ಕಾಯ್ದಿರಿಸಲಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಕೆಲವು ದಾಖಲೆಗಳನ್ನು ಸಹ ನೀಡಬೇಕಾಗಬಹುದು. ಪಡಿತರ ಚೀಟಿ, ಕುಟುಂಬದ ಸಂಖ್ಯೆ ಮುಂತಾದ ವಿವರಗಳ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ದಾಖಲೆಗಳನ್ನು ವಿತರಕರಿಗೆ ಸಲ್ಲಿಸಬೇಕು ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ ಮತ್ತು ಸಿಲಿಂಡರ್ ನೀಡುತ್ತಾರೆ. ಕಾಳಸಂತೆ ತಡೆಯಲು ಹಾಗೂ ಬಡವರಿಗೆ ಸಕಾಲಕ್ಕೆ ಸಿಲಿಂಡರ್‌ಗಳನ್ನು ಪೂರೈಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇಲಾಖೆಯ ಮಾಹಿತಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

7 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

8 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

12 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago