Advertisement
ರಾಷ್ಟ್ರೀಯ

ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

Share

ಸರ್ಕಾರ ಈಗ ಗೃಹಬಳಕೆಯ ಅನಿಲ ಸಿಲಿಂಡರ್ ಗಳಿಗೆ ಕೋಟಾವನ್ನು ನಿಗದಿಪಡಿಸಿದೆ. ಆದರೆ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಅಗತ್ಯವಿದ್ದರೆ ದಾಖಲೆ ತೋರಿಸಬೇಕಾಗುತ್ತದೆ.  ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು ಈಗ ವರ್ಷಕ್ಕೆ 15 ಬಾರಿ ಮಾತ್ರ ಗ್ಯಾಸ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಲು ಸಾಧ್ಯವಾಗುತ್ತದೆ.  ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕು.

ಒಂದು ವರ್ಷದಲ್ಲಿ 15 ಸಿಲಿಂಡರ್‌ಗಳ ರೀ ಫಿಲ್ಲಿಂಗ್ ನಿಗದಿಪಡಿಸಲಾಗಿದೆ., ಆದರೆ ಯಾರಾದರೂ ಹೆಚ್ಚಿನ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಬಯಸಿದರೆ ಅದರ ಮೇಲೆ ಯಾವುದೇ ನಿರ್ಬಂಧವಿರುವುದಿಲ್ಲ. ಇದಕ್ಕೆ ದಾಖಲೆಗಳನ್ನು ತೋರಿಸಬೇಕು. ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕಾಗುತ್ತದೆ.

ಹೊಸ ನಿಯಮದ ಪ್ರಕಾರ ವರ್ಷದಲ್ಲಿ ಕೇವಲ 15 ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು ಎಂದು ಹೇಳಲಾಗಿದೆ, ಆದರೆ ಹೊಸ ನಿಯಮ ಅನ್ವಯಿಸಿದರೆ, ವರ್ಷದಲ್ಲಿ ಪ್ರತಿ ಪ್ರಕಾರದ ಒಟ್ಟು 15 ಗ್ಯಾಸ್ ಸಿಲಿಂಡರ್ ಅನ್ನು ಮಾತ್ರ ಬುಕ್ ಮಾಡಬಹುದು. ಸದ್ಯಕ್ಕೆ ಸಬ್ಸಿಡಿ ರಹಿತ ಸಿಲಿಂಡರ್‌ಗಳಿಗೆ ಯಾವುದೇ ಕೋಟಾ ನಿಗದಿಯಾಗಿಲ್ಲ. ಸಿಲಿಂಡರ್ ಮೇಲೆ ಸಬ್ಸಿಡಿ ತೆಗೆದುಕೊಳ್ಳದವರು ಎಷ್ಟು ಬೇಕಾದರೂ ಸಿಲಿಂಡರ್ ತೆಗೆದುಕೊಳ್ಳಬಹುದು. ಆದರೆ ಹೊಸ ನಿಯಮ ಜಾರಿಯಾದ ನಂತರ ಒಂದು ವರ್ಷದಲ್ಲಿ 15 ಸಿಲಿಂಡರ್ ಬುಕ್ಕಿಂಗ್ ಮಾಡಬಹುದಾಗಿದೆ. ಹೆಚ್ಚುವರಿ ಸಿಲಿಂಡರ್‌ಗಳನ್ನು ಯಾವ ಅಗತ್ಯಕ್ಕೆ ಕಾಯ್ದಿರಿಸಲಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಕೆಲವು ದಾಖಲೆಗಳನ್ನು ಸಹ ನೀಡಬೇಕಾಗಬಹುದು. ಪಡಿತರ ಚೀಟಿ, ಕುಟುಂಬದ ಸಂಖ್ಯೆ ಮುಂತಾದ ವಿವರಗಳ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ದಾಖಲೆಗಳನ್ನು ವಿತರಕರಿಗೆ ಸಲ್ಲಿಸಬೇಕು ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ ಮತ್ತು ಸಿಲಿಂಡರ್ ನೀಡುತ್ತಾರೆ. ಕಾಳಸಂತೆ ತಡೆಯಲು ಹಾಗೂ ಬಡವರಿಗೆ ಸಕಾಲಕ್ಕೆ ಸಿಲಿಂಡರ್‌ಗಳನ್ನು ಪೂರೈಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇಲಾಖೆಯ ಮಾಹಿತಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

5 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

21 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago