Advertisement
ರಾಷ್ಟ್ರೀಯ

ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

Share

ಸರ್ಕಾರ ಈಗ ಗೃಹಬಳಕೆಯ ಅನಿಲ ಸಿಲಿಂಡರ್ ಗಳಿಗೆ ಕೋಟಾವನ್ನು ನಿಗದಿಪಡಿಸಿದೆ. ಆದರೆ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಅಗತ್ಯವಿದ್ದರೆ ದಾಖಲೆ ತೋರಿಸಬೇಕಾಗುತ್ತದೆ.  ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು ಈಗ ವರ್ಷಕ್ಕೆ 15 ಬಾರಿ ಮಾತ್ರ ಗ್ಯಾಸ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಲು ಸಾಧ್ಯವಾಗುತ್ತದೆ.  ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕು.

ಒಂದು ವರ್ಷದಲ್ಲಿ 15 ಸಿಲಿಂಡರ್‌ಗಳ ರೀ ಫಿಲ್ಲಿಂಗ್ ನಿಗದಿಪಡಿಸಲಾಗಿದೆ., ಆದರೆ ಯಾರಾದರೂ ಹೆಚ್ಚಿನ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಬಯಸಿದರೆ ಅದರ ಮೇಲೆ ಯಾವುದೇ ನಿರ್ಬಂಧವಿರುವುದಿಲ್ಲ. ಇದಕ್ಕೆ ದಾಖಲೆಗಳನ್ನು ತೋರಿಸಬೇಕು. ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕಾಗುತ್ತದೆ.

ಹೊಸ ನಿಯಮದ ಪ್ರಕಾರ ವರ್ಷದಲ್ಲಿ ಕೇವಲ 15 ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು ಎಂದು ಹೇಳಲಾಗಿದೆ, ಆದರೆ ಹೊಸ ನಿಯಮ ಅನ್ವಯಿಸಿದರೆ, ವರ್ಷದಲ್ಲಿ ಪ್ರತಿ ಪ್ರಕಾರದ ಒಟ್ಟು 15 ಗ್ಯಾಸ್ ಸಿಲಿಂಡರ್ ಅನ್ನು ಮಾತ್ರ ಬುಕ್ ಮಾಡಬಹುದು. ಸದ್ಯಕ್ಕೆ ಸಬ್ಸಿಡಿ ರಹಿತ ಸಿಲಿಂಡರ್‌ಗಳಿಗೆ ಯಾವುದೇ ಕೋಟಾ ನಿಗದಿಯಾಗಿಲ್ಲ. ಸಿಲಿಂಡರ್ ಮೇಲೆ ಸಬ್ಸಿಡಿ ತೆಗೆದುಕೊಳ್ಳದವರು ಎಷ್ಟು ಬೇಕಾದರೂ ಸಿಲಿಂಡರ್ ತೆಗೆದುಕೊಳ್ಳಬಹುದು. ಆದರೆ ಹೊಸ ನಿಯಮ ಜಾರಿಯಾದ ನಂತರ ಒಂದು ವರ್ಷದಲ್ಲಿ 15 ಸಿಲಿಂಡರ್ ಬುಕ್ಕಿಂಗ್ ಮಾಡಬಹುದಾಗಿದೆ. ಹೆಚ್ಚುವರಿ ಸಿಲಿಂಡರ್‌ಗಳನ್ನು ಯಾವ ಅಗತ್ಯಕ್ಕೆ ಕಾಯ್ದಿರಿಸಲಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಕೆಲವು ದಾಖಲೆಗಳನ್ನು ಸಹ ನೀಡಬೇಕಾಗಬಹುದು. ಪಡಿತರ ಚೀಟಿ, ಕುಟುಂಬದ ಸಂಖ್ಯೆ ಮುಂತಾದ ವಿವರಗಳ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ದಾಖಲೆಗಳನ್ನು ವಿತರಕರಿಗೆ ಸಲ್ಲಿಸಬೇಕು ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ ಮತ್ತು ಸಿಲಿಂಡರ್ ನೀಡುತ್ತಾರೆ. ಕಾಳಸಂತೆ ತಡೆಯಲು ಹಾಗೂ ಬಡವರಿಗೆ ಸಕಾಲಕ್ಕೆ ಸಿಲಿಂಡರ್‌ಗಳನ್ನು ಪೂರೈಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇಲಾಖೆಯ ಮಾಹಿತಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

7 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

8 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

8 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

8 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago