Advertisement
ಸುದ್ದಿಗಳು

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

Share

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಕಾಟಿಗನೆರೆ ಗ್ರಾಮದ ಕೃಷಿಕ ಶಿವಪ್ರಸಾದ್ ಅವರು, ಬೇವಿನ ಬೀಜ ಸಂಗ್ರಹ ಮತ್ತು ಸಂಸ್ಕರಣೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಕಡಿಮೆ ನೀರಿನಲ್ಲಿ ಸಾಧ್ಯವಾಗುವ ಕೃಷಿ ಮತ್ತು ಮೌಲ್ಯವರ್ಧನೆಯತ್ತ ಗಮನಹರಿಸಿ ಅವರು ‘ಶ್ರೀ ಕಲ್ಲೇಶ್ವರ ಕಾಯರ್ ಇಂಡಸ್ಟ್ರೀಸ್ ಮತ್ತು ಆರ್ಗ್ಯಾನಿಕ್ ಮೆನ್ಯೂರ್’ ಎಂಬ ಘಟಕವನ್ನು ಆರಂಭಿಸಿದ್ದಾರೆ.

ಬಿ.ಕಾಂ ಪದವೀಧರರಾದ ಶಿವಪ್ರಸಾದ್ ಅವರು ಆರಂಭದಲ್ಲಿ ತೆಂಗಿನ ನಾರಿನಿಂದ ಕಾಯರ್ ಉತ್ಪಾದನೆ ಮಾಡಲು ಯೋಚಿಸಿದ್ದರು. ಆದರೆ ಬಯಲು ಪ್ರದೇಶದಲ್ಲಿ ನೀರಿನ ಅಭಾವವನ್ನು ಮನಗಂಡು, ಬೇವಿನ ಬೀಜ ಸಂಸ್ಕರಣೆಯತ್ತ ತಿರುಗಿದರು. ರೈತರಿಂದ ಬೇವಿನ ಬೀಜಗಳನ್ನು ಸಂಗ್ರಹಿಸಿ, ಅವುಗಳನ್ನು ಸಂಸ್ಕರಿಸಿ “ರಾಯಲ್ ಸಿ.ಎಸ್.ಪಿ – ಬೇವಿನ ಪುಡಿ” ಎಂಬ ಹೆಸರಿನಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ.

ಅರಣ್ಯ ಇಲಾಖೆಯ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಅವರು 4 ಎಕರೆ ಪ್ರದೇಶದಲ್ಲಿ ಶ್ರೀಗಂಧ ಬೆಳೆದು ಮಿಶ್ರ ಕೃಷಿಯ ಮಾದರಿಯನ್ನು ರೂಪಿಸಿದ್ದಾರೆ. ಕೃಷಿ ವಿಶ್ವವಿದ್ಯಾಲಯಗಳ ತಾಂತ್ರಿಕ ಸಲಹೆ ಪಡೆದು ಉತ್ಪನ್ನದ ಗುಣಮಟ್ಟ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಂಡಿದ್ದಾರೆ.

ಇಂದು ಇವರ ಬೇವಿನ ಪುಡಿ ರಾಜ್ಯದಾದ್ಯಂತ ಬೇಡಿಕೆ ಹೊಂದಿದೆ. ಈ ಘಟಕವು ಶಿವಪ್ರಸಾದ್ ಅವರಿಗೆ ಉತ್ತಮ ಆದಾಯ ತರುವುದರ ಜೊತೆಗೆ, ಸ್ಥಳೀಯ ಯುವಕ-ಯುವತಿಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ.

ಸ್ಥಳೀಯ ರೈತರು ಹೇಳುವಂತೆ, ಈ ಸಾವಯವ ಗೊಬ್ಬರ ಬಳಕೆಯಿಂದ ಬೆಳೆಗಳಲ್ಲಿ ಉತ್ತಮ ಇಳುವರಿ ಕಂಡುಬರುತ್ತಿದೆ. ವಿಶೇಷವಾಗಿ ಅಡಿಕೆ ಬೆಳೆಗಳಲ್ಲಿ ಕೀಟಬಾಧೆ ಕಡಿಮೆಯಾಗಿದ್ದು, ಎಳೆ ಕಾಯಿಗಳು ಉದುರುವ ಸಮಸ್ಯೆ ತಗ್ಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಪ್ರಸಾದ್ ಅವರ ಮಾತಿನಲ್ಲಿ, “ಕೃಷಿ ಕುಟುಂಬದಿಂದ ಬಂದ ನಾನು ಹೊಸದನ್ನು ಮಾಡಲು ಬಯಸಿದ್ದೆ. ಆರಂಭದಲ್ಲಿ ಸವಾಲುಗಳಿದ್ದರೂ, ಇಂದು ನಮ್ಮ ಬೇವಿನ ಪುಡಿ ರಾಜ್ಯದಾದ್ಯಂತ ರೈತರ ಮೆಚ್ಚುಗೆ ಗಳಿಸಿದೆ,” ಎಂದರು.

ಒಟ್ಟಾರೆ, ಸಣ್ಣ ಮಟ್ಟದಲ್ಲಿ ಆರಂಭಗೊಂಡ ಈ ಘಟಕ ಇಂದು ರಾಜ್ಯಮಟ್ಟದಲ್ಲಿ ಮನ್ನಣೆ ಪಡೆದಿದ್ದು, ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡಲು ಬಯಸುವ ಯುವಕರಿಗೆ ಸ್ಪೂರ್ತಿದಾಯಕ ಮಾದರಿಯಾಗಿದೆ.

A farmer from Chikkamagaluru, Shivaprasad, has gained statewide recognition by establishing a neem seed processing unit. By producing organic neem powder fertilizer, he has created a profitable agribusiness while generating local employment and promoting sustainable farming practices.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

12 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

21 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

21 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago