Advertisement
ಸುದ್ದಿಗಳು

ನೆಗಳಗುಳಿ ರಸ್ತೆ ಗುಳಿ ಬಿದ್ದೇ ಹೋಯ್ತು…! | ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿದ ಬೇಡಿಕೆ | ಪ್ರಧಾನಿ ಕಾರ್ಯಾಲಯದಿಂದಲೂ ಸೂಚನೆ …! |

Share

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು  ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಕಷ್ಟವಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಪ್ರಧಾನಿ ಕಚೇರಿವರೆಗೂ ದೂರು ಹೋಗಿತ್ತು. ಪ್ರಧಾನಿ ಕಚೇರಿಯಿಂದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸೂಚನೆಯೂ ಬಂದಿತ್ತು. ಹಾಗಿದ್ದರೂ ರಸ್ತೆ ಸುಧಾರಣೆಯಾಗಿಲ್ಲ.

Advertisement
Advertisement

ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು ಅಲ್ಲಲ್ಲಿ ಕೆಟ್ಟು ಹೋದುದರಿಂದ ತುರ್ತು ಸಂದರ್ಭದಲ್ಲಿ ಯಾವುದೇ ವಾಹನದವರು ಈ ಬಾಗಕ್ಕೆ ಬರದಿರುವುದಿಂದ ತೊಂದರೆಯನ್ನು ಅನುಭವಿಸುತ್ತಿದ್ದಾರೆ.ಸುಮಾರು 50 ಮನೆಯವರಿಗೆ ಸಂಪರ್ಕದ ಏಕೈಕ ರಸ್ತೆ ಇದಾಗಿದ್ದು ಎಲ್ಲ ಜನರು ಈ ರಸ್ತೆಯನ್ನು ಅವಲಂಬಿಸುವಂತಾಗಿದೆ. ಮಳೆಗಾಲದಲ್ಲಿ ಅಗತ್ಯ ವಸ್ತುಗಳನ್ನು ತಲೆಯಲ್ಲಿ ಹೊತ್ತು ಕೊಂಡು ಹೋಗುವ ಪರಿಸ್ಥಿತಿ ಈ ಊರಿನವರದ್ದಾಗಿದೆ.

ಈ ಗ್ರಾಮೀಣ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ನೆಗಳಗುಳಿಯ ಯುವಕ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ  ರಸ್ತೆಯ ಸ್ಥಿತಿಗತಿಯ ಬಗ್ಗೆ ತಿಳಿಸಿ ಅನುದಾನ ಬಿಡುಗಡೆಗೊಳಿಸುವಂತೆ ಕೋರಿ ಮನವಿ ಮಾಡಿದರು, ಈ ಮನವಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿ ಕಾರ್ಯಾಲಯವು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಈ ರಸ್ತೆಯನ್ನು ತಕ್ಷಣ ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳಲು ವರದಿಯನ್ನು ನೀಡಿತು. ಈ ಮನವಿಯನ್ನು ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಮಂಗಳೂರು,ಅಳಿಕೆ ಗ್ರಾಮ ಪಂಚಾಯತ್ ಗೆ ಈ ರಸ್ತೆಯನ್ನು ಪರಿಶೀಲಿಸಿ ಕ್ರಮ ಕೆಗೊಳ್ಳಲು ತಿಳಿಸಿತು. ಆದರೆ ಈ ರಸ್ತೆಗೆ ಅಭಿವೃದ್ಧಿಗೆ ಪಂಚಾಯತ್‌ ನಲ್ಲಿ ಬೇಕಾದ ಅನುದಾನವಿಲ್ಲ ಎಂದು ತಿಳಿಸಿತು.

ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗ ಮಂಗಳೂರು ಈ ರಸ್ತೆಯು 1.50 ಕಿ.ಮೀ ಉದ್ದವಿದ್ದು ಇದಕ್ಕಾಗಿ ಅಂದಾಜು 105 ಲಕ್ಷ ವೆಚ್ಚವಾಗುತ್ತದೆ ಈ ಕಡತವನ್ನು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಕಳುಹಿಸಲಾಗಿದೆ. ರಸ್ತೆ ದುರಸ್ತಿಗೆ ಬೇಕಾದ ಈ ಮೊತ್ತ ತಮ್ಮಲ್ಲಿ ಇಲ್ಲ ಹಾಗೂ ಈ ಕಡತವನ್ನು ಕರ್ನಾಟಕ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು. 2017 ರಲ್ಲಿ ಈ ರಸ್ತೆ ದುರಸ್ತಿಯ ಬಗ್ಗೆ ತಯಾರಾದ  ಸರ್ಕಾರದ ಕಡತ ವಿಧಾನ ಸೌದದಲ್ಲಿ ಇದ್ದು ಈ ರಸ್ತೆ ದುರಸ್ಥಿಯ ಕಡತದ ದ ಬಗ್ಗೆ ಸ್ಥಳೀಯ ಶಾಸಕರಲ್ಲಿ ಹಲವು ಬಾರಿ ಮನವಿ ಮಾಡಿದರೂ ಯಾವುದು ಫಲ ಕಾಣಲಿಲ್ಲ.

ಊರಿನ ನಾಗರಿಕರು ಈ ರಸ್ತೆಯ ದುರಸ್ಥಿಯುು ತಕ್ಷಣ ಆಗಬೇಕೆಂದು ಒಂದು ನೆಗಳಗುಳಿ ರಸ್ತೆ ಹಿತರಕ್ಷಣಾ ವೇದಿಕೆಯನ್ನು ಮಾಡಿಕೊಂಡು ಈ ರಸ್ತೆಯ ಅಭಿವೃದ್ಧಿಯು ಆಗದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಹಾಗೂ  ಹೋರಾಟಕ್ಕೆ ಮುಂದಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

13 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

13 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

14 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

14 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

22 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

23 hours ago