Advertisement
ಸುದ್ದಿಗಳು

ನೆಗಳಗುಳಿ ರಸ್ತೆ ಗುಳಿ ಬಿದ್ದೇ ಹೋಯ್ತು…! | ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿದ ಬೇಡಿಕೆ | ಪ್ರಧಾನಿ ಕಾರ್ಯಾಲಯದಿಂದಲೂ ಸೂಚನೆ …! |

Share

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು  ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಕಷ್ಟವಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಪ್ರಧಾನಿ ಕಚೇರಿವರೆಗೂ ದೂರು ಹೋಗಿತ್ತು. ಪ್ರಧಾನಿ ಕಚೇರಿಯಿಂದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸೂಚನೆಯೂ ಬಂದಿತ್ತು. ಹಾಗಿದ್ದರೂ ರಸ್ತೆ ಸುಧಾರಣೆಯಾಗಿಲ್ಲ.

ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು ಅಲ್ಲಲ್ಲಿ ಕೆಟ್ಟು ಹೋದುದರಿಂದ ತುರ್ತು ಸಂದರ್ಭದಲ್ಲಿ ಯಾವುದೇ ವಾಹನದವರು ಈ ಬಾಗಕ್ಕೆ ಬರದಿರುವುದಿಂದ ತೊಂದರೆಯನ್ನು ಅನುಭವಿಸುತ್ತಿದ್ದಾರೆ.ಸುಮಾರು 50 ಮನೆಯವರಿಗೆ ಸಂಪರ್ಕದ ಏಕೈಕ ರಸ್ತೆ ಇದಾಗಿದ್ದು ಎಲ್ಲ ಜನರು ಈ ರಸ್ತೆಯನ್ನು ಅವಲಂಬಿಸುವಂತಾಗಿದೆ. ಮಳೆಗಾಲದಲ್ಲಿ ಅಗತ್ಯ ವಸ್ತುಗಳನ್ನು ತಲೆಯಲ್ಲಿ ಹೊತ್ತು ಕೊಂಡು ಹೋಗುವ ಪರಿಸ್ಥಿತಿ ಈ ಊರಿನವರದ್ದಾಗಿದೆ.

ಈ ಗ್ರಾಮೀಣ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ನೆಗಳಗುಳಿಯ ಯುವಕ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ  ರಸ್ತೆಯ ಸ್ಥಿತಿಗತಿಯ ಬಗ್ಗೆ ತಿಳಿಸಿ ಅನುದಾನ ಬಿಡುಗಡೆಗೊಳಿಸುವಂತೆ ಕೋರಿ ಮನವಿ ಮಾಡಿದರು, ಈ ಮನವಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿ ಕಾರ್ಯಾಲಯವು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಈ ರಸ್ತೆಯನ್ನು ತಕ್ಷಣ ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳಲು ವರದಿಯನ್ನು ನೀಡಿತು. ಈ ಮನವಿಯನ್ನು ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಮಂಗಳೂರು,ಅಳಿಕೆ ಗ್ರಾಮ ಪಂಚಾಯತ್ ಗೆ ಈ ರಸ್ತೆಯನ್ನು ಪರಿಶೀಲಿಸಿ ಕ್ರಮ ಕೆಗೊಳ್ಳಲು ತಿಳಿಸಿತು. ಆದರೆ ಈ ರಸ್ತೆಗೆ ಅಭಿವೃದ್ಧಿಗೆ ಪಂಚಾಯತ್‌ ನಲ್ಲಿ ಬೇಕಾದ ಅನುದಾನವಿಲ್ಲ ಎಂದು ತಿಳಿಸಿತು.

ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗ ಮಂಗಳೂರು ಈ ರಸ್ತೆಯು 1.50 ಕಿ.ಮೀ ಉದ್ದವಿದ್ದು ಇದಕ್ಕಾಗಿ ಅಂದಾಜು 105 ಲಕ್ಷ ವೆಚ್ಚವಾಗುತ್ತದೆ ಈ ಕಡತವನ್ನು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಕಳುಹಿಸಲಾಗಿದೆ. ರಸ್ತೆ ದುರಸ್ತಿಗೆ ಬೇಕಾದ ಈ ಮೊತ್ತ ತಮ್ಮಲ್ಲಿ ಇಲ್ಲ ಹಾಗೂ ಈ ಕಡತವನ್ನು ಕರ್ನಾಟಕ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು. 2017 ರಲ್ಲಿ ಈ ರಸ್ತೆ ದುರಸ್ತಿಯ ಬಗ್ಗೆ ತಯಾರಾದ  ಸರ್ಕಾರದ ಕಡತ ವಿಧಾನ ಸೌದದಲ್ಲಿ ಇದ್ದು ಈ ರಸ್ತೆ ದುರಸ್ಥಿಯ ಕಡತದ ದ ಬಗ್ಗೆ ಸ್ಥಳೀಯ ಶಾಸಕರಲ್ಲಿ ಹಲವು ಬಾರಿ ಮನವಿ ಮಾಡಿದರೂ ಯಾವುದು ಫಲ ಕಾಣಲಿಲ್ಲ.

ಊರಿನ ನಾಗರಿಕರು ಈ ರಸ್ತೆಯ ದುರಸ್ಥಿಯುು ತಕ್ಷಣ ಆಗಬೇಕೆಂದು ಒಂದು ನೆಗಳಗುಳಿ ರಸ್ತೆ ಹಿತರಕ್ಷಣಾ ವೇದಿಕೆಯನ್ನು ಮಾಡಿಕೊಂಡು ಈ ರಸ್ತೆಯ ಅಭಿವೃದ್ಧಿಯು ಆಗದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಹಾಗೂ  ಹೋರಾಟಕ್ಕೆ ಮುಂದಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

7 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

8 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

23 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

24 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago