Advertisement
ಸುದ್ದಿಗಳು

ನೆಗಳಗುಳಿ ರಸ್ತೆ ಗುಳಿ ಬಿದ್ದೇ ಹೋಯ್ತು…! | ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿದ ಬೇಡಿಕೆ | ಪ್ರಧಾನಿ ಕಾರ್ಯಾಲಯದಿಂದಲೂ ಸೂಚನೆ …! |

Share

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು  ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಕಷ್ಟವಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಪ್ರಧಾನಿ ಕಚೇರಿವರೆಗೂ ದೂರು ಹೋಗಿತ್ತು. ಪ್ರಧಾನಿ ಕಚೇರಿಯಿಂದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸೂಚನೆಯೂ ಬಂದಿತ್ತು. ಹಾಗಿದ್ದರೂ ರಸ್ತೆ ಸುಧಾರಣೆಯಾಗಿಲ್ಲ.

ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು ಅಲ್ಲಲ್ಲಿ ಕೆಟ್ಟು ಹೋದುದರಿಂದ ತುರ್ತು ಸಂದರ್ಭದಲ್ಲಿ ಯಾವುದೇ ವಾಹನದವರು ಈ ಬಾಗಕ್ಕೆ ಬರದಿರುವುದಿಂದ ತೊಂದರೆಯನ್ನು ಅನುಭವಿಸುತ್ತಿದ್ದಾರೆ.ಸುಮಾರು 50 ಮನೆಯವರಿಗೆ ಸಂಪರ್ಕದ ಏಕೈಕ ರಸ್ತೆ ಇದಾಗಿದ್ದು ಎಲ್ಲ ಜನರು ಈ ರಸ್ತೆಯನ್ನು ಅವಲಂಬಿಸುವಂತಾಗಿದೆ. ಮಳೆಗಾಲದಲ್ಲಿ ಅಗತ್ಯ ವಸ್ತುಗಳನ್ನು ತಲೆಯಲ್ಲಿ ಹೊತ್ತು ಕೊಂಡು ಹೋಗುವ ಪರಿಸ್ಥಿತಿ ಈ ಊರಿನವರದ್ದಾಗಿದೆ.

ಈ ಗ್ರಾಮೀಣ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ನೆಗಳಗುಳಿಯ ಯುವಕ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ  ರಸ್ತೆಯ ಸ್ಥಿತಿಗತಿಯ ಬಗ್ಗೆ ತಿಳಿಸಿ ಅನುದಾನ ಬಿಡುಗಡೆಗೊಳಿಸುವಂತೆ ಕೋರಿ ಮನವಿ ಮಾಡಿದರು, ಈ ಮನವಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿ ಕಾರ್ಯಾಲಯವು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಈ ರಸ್ತೆಯನ್ನು ತಕ್ಷಣ ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳಲು ವರದಿಯನ್ನು ನೀಡಿತು. ಈ ಮನವಿಯನ್ನು ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಮಂಗಳೂರು,ಅಳಿಕೆ ಗ್ರಾಮ ಪಂಚಾಯತ್ ಗೆ ಈ ರಸ್ತೆಯನ್ನು ಪರಿಶೀಲಿಸಿ ಕ್ರಮ ಕೆಗೊಳ್ಳಲು ತಿಳಿಸಿತು. ಆದರೆ ಈ ರಸ್ತೆಗೆ ಅಭಿವೃದ್ಧಿಗೆ ಪಂಚಾಯತ್‌ ನಲ್ಲಿ ಬೇಕಾದ ಅನುದಾನವಿಲ್ಲ ಎಂದು ತಿಳಿಸಿತು.

ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗ ಮಂಗಳೂರು ಈ ರಸ್ತೆಯು 1.50 ಕಿ.ಮೀ ಉದ್ದವಿದ್ದು ಇದಕ್ಕಾಗಿ ಅಂದಾಜು 105 ಲಕ್ಷ ವೆಚ್ಚವಾಗುತ್ತದೆ ಈ ಕಡತವನ್ನು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಕಳುಹಿಸಲಾಗಿದೆ. ರಸ್ತೆ ದುರಸ್ತಿಗೆ ಬೇಕಾದ ಈ ಮೊತ್ತ ತಮ್ಮಲ್ಲಿ ಇಲ್ಲ ಹಾಗೂ ಈ ಕಡತವನ್ನು ಕರ್ನಾಟಕ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು. 2017 ರಲ್ಲಿ ಈ ರಸ್ತೆ ದುರಸ್ತಿಯ ಬಗ್ಗೆ ತಯಾರಾದ  ಸರ್ಕಾರದ ಕಡತ ವಿಧಾನ ಸೌದದಲ್ಲಿ ಇದ್ದು ಈ ರಸ್ತೆ ದುರಸ್ಥಿಯ ಕಡತದ ದ ಬಗ್ಗೆ ಸ್ಥಳೀಯ ಶಾಸಕರಲ್ಲಿ ಹಲವು ಬಾರಿ ಮನವಿ ಮಾಡಿದರೂ ಯಾವುದು ಫಲ ಕಾಣಲಿಲ್ಲ.

ಊರಿನ ನಾಗರಿಕರು ಈ ರಸ್ತೆಯ ದುರಸ್ಥಿಯುು ತಕ್ಷಣ ಆಗಬೇಕೆಂದು ಒಂದು ನೆಗಳಗುಳಿ ರಸ್ತೆ ಹಿತರಕ್ಷಣಾ ವೇದಿಕೆಯನ್ನು ಮಾಡಿಕೊಂಡು ಈ ರಸ್ತೆಯ ಅಭಿವೃದ್ಧಿಯು ಆಗದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಹಾಗೂ  ಹೋರಾಟಕ್ಕೆ ಮುಂದಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

5 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

8 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

9 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

10 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

22 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago