Advertisement
ಸುದ್ದಿಗಳು

ನೆಗಳಗುಳಿ ರಸ್ತೆ ಗುಳಿ ಬಿದ್ದೇ ಹೋಯ್ತು…! | ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿದ ಬೇಡಿಕೆ | ಪ್ರಧಾನಿ ಕಾರ್ಯಾಲಯದಿಂದಲೂ ಸೂಚನೆ …! |

Share

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು  ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಕಷ್ಟವಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಪ್ರಧಾನಿ ಕಚೇರಿವರೆಗೂ ದೂರು ಹೋಗಿತ್ತು. ಪ್ರಧಾನಿ ಕಚೇರಿಯಿಂದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸೂಚನೆಯೂ ಬಂದಿತ್ತು. ಹಾಗಿದ್ದರೂ ರಸ್ತೆ ಸುಧಾರಣೆಯಾಗಿಲ್ಲ.

ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು ಅಲ್ಲಲ್ಲಿ ಕೆಟ್ಟು ಹೋದುದರಿಂದ ತುರ್ತು ಸಂದರ್ಭದಲ್ಲಿ ಯಾವುದೇ ವಾಹನದವರು ಈ ಬಾಗಕ್ಕೆ ಬರದಿರುವುದಿಂದ ತೊಂದರೆಯನ್ನು ಅನುಭವಿಸುತ್ತಿದ್ದಾರೆ.ಸುಮಾರು 50 ಮನೆಯವರಿಗೆ ಸಂಪರ್ಕದ ಏಕೈಕ ರಸ್ತೆ ಇದಾಗಿದ್ದು ಎಲ್ಲ ಜನರು ಈ ರಸ್ತೆಯನ್ನು ಅವಲಂಬಿಸುವಂತಾಗಿದೆ. ಮಳೆಗಾಲದಲ್ಲಿ ಅಗತ್ಯ ವಸ್ತುಗಳನ್ನು ತಲೆಯಲ್ಲಿ ಹೊತ್ತು ಕೊಂಡು ಹೋಗುವ ಪರಿಸ್ಥಿತಿ ಈ ಊರಿನವರದ್ದಾಗಿದೆ.

ಈ ಗ್ರಾಮೀಣ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ನೆಗಳಗುಳಿಯ ಯುವಕ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ  ರಸ್ತೆಯ ಸ್ಥಿತಿಗತಿಯ ಬಗ್ಗೆ ತಿಳಿಸಿ ಅನುದಾನ ಬಿಡುಗಡೆಗೊಳಿಸುವಂತೆ ಕೋರಿ ಮನವಿ ಮಾಡಿದರು, ಈ ಮನವಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿ ಕಾರ್ಯಾಲಯವು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಈ ರಸ್ತೆಯನ್ನು ತಕ್ಷಣ ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳಲು ವರದಿಯನ್ನು ನೀಡಿತು. ಈ ಮನವಿಯನ್ನು ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಮಂಗಳೂರು,ಅಳಿಕೆ ಗ್ರಾಮ ಪಂಚಾಯತ್ ಗೆ ಈ ರಸ್ತೆಯನ್ನು ಪರಿಶೀಲಿಸಿ ಕ್ರಮ ಕೆಗೊಳ್ಳಲು ತಿಳಿಸಿತು. ಆದರೆ ಈ ರಸ್ತೆಗೆ ಅಭಿವೃದ್ಧಿಗೆ ಪಂಚಾಯತ್‌ ನಲ್ಲಿ ಬೇಕಾದ ಅನುದಾನವಿಲ್ಲ ಎಂದು ತಿಳಿಸಿತು.

ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗ ಮಂಗಳೂರು ಈ ರಸ್ತೆಯು 1.50 ಕಿ.ಮೀ ಉದ್ದವಿದ್ದು ಇದಕ್ಕಾಗಿ ಅಂದಾಜು 105 ಲಕ್ಷ ವೆಚ್ಚವಾಗುತ್ತದೆ ಈ ಕಡತವನ್ನು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಕಳುಹಿಸಲಾಗಿದೆ. ರಸ್ತೆ ದುರಸ್ತಿಗೆ ಬೇಕಾದ ಈ ಮೊತ್ತ ತಮ್ಮಲ್ಲಿ ಇಲ್ಲ ಹಾಗೂ ಈ ಕಡತವನ್ನು ಕರ್ನಾಟಕ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು. 2017 ರಲ್ಲಿ ಈ ರಸ್ತೆ ದುರಸ್ತಿಯ ಬಗ್ಗೆ ತಯಾರಾದ  ಸರ್ಕಾರದ ಕಡತ ವಿಧಾನ ಸೌದದಲ್ಲಿ ಇದ್ದು ಈ ರಸ್ತೆ ದುರಸ್ಥಿಯ ಕಡತದ ದ ಬಗ್ಗೆ ಸ್ಥಳೀಯ ಶಾಸಕರಲ್ಲಿ ಹಲವು ಬಾರಿ ಮನವಿ ಮಾಡಿದರೂ ಯಾವುದು ಫಲ ಕಾಣಲಿಲ್ಲ.

ಊರಿನ ನಾಗರಿಕರು ಈ ರಸ್ತೆಯ ದುರಸ್ಥಿಯುು ತಕ್ಷಣ ಆಗಬೇಕೆಂದು ಒಂದು ನೆಗಳಗುಳಿ ರಸ್ತೆ ಹಿತರಕ್ಷಣಾ ವೇದಿಕೆಯನ್ನು ಮಾಡಿಕೊಂಡು ಈ ರಸ್ತೆಯ ಅಭಿವೃದ್ಧಿಯು ಆಗದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಹಾಗೂ  ಹೋರಾಟಕ್ಕೆ ಮುಂದಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 hour ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

2 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

2 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

7 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago