Advertisement
ಸುದ್ದಿಗಳು

ನೆಗಳಗುಳಿ ರಸ್ತೆ ಗುಳಿ ಬಿದ್ದೇ ಹೋಯ್ತು…! | ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿದ ಬೇಡಿಕೆ | ಪ್ರಧಾನಿ ಕಾರ್ಯಾಲಯದಿಂದಲೂ ಸೂಚನೆ …! |

Share

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು  ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಕಷ್ಟವಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಪ್ರಧಾನಿ ಕಚೇರಿವರೆಗೂ ದೂರು ಹೋಗಿತ್ತು. ಪ್ರಧಾನಿ ಕಚೇರಿಯಿಂದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸೂಚನೆಯೂ ಬಂದಿತ್ತು. ಹಾಗಿದ್ದರೂ ರಸ್ತೆ ಸುಧಾರಣೆಯಾಗಿಲ್ಲ.

ಬಿಲ್ಲಂಪದವು – ನೆಗಳಗುಳಿ ಶಾಲಾ ರಸ್ತೆಯು ಅಲ್ಲಲ್ಲಿ ಕೆಟ್ಟು ಹೋದುದರಿಂದ ತುರ್ತು ಸಂದರ್ಭದಲ್ಲಿ ಯಾವುದೇ ವಾಹನದವರು ಈ ಬಾಗಕ್ಕೆ ಬರದಿರುವುದಿಂದ ತೊಂದರೆಯನ್ನು ಅನುಭವಿಸುತ್ತಿದ್ದಾರೆ.ಸುಮಾರು 50 ಮನೆಯವರಿಗೆ ಸಂಪರ್ಕದ ಏಕೈಕ ರಸ್ತೆ ಇದಾಗಿದ್ದು ಎಲ್ಲ ಜನರು ಈ ರಸ್ತೆಯನ್ನು ಅವಲಂಬಿಸುವಂತಾಗಿದೆ. ಮಳೆಗಾಲದಲ್ಲಿ ಅಗತ್ಯ ವಸ್ತುಗಳನ್ನು ತಲೆಯಲ್ಲಿ ಹೊತ್ತು ಕೊಂಡು ಹೋಗುವ ಪರಿಸ್ಥಿತಿ ಈ ಊರಿನವರದ್ದಾಗಿದೆ.

ಈ ಗ್ರಾಮೀಣ ರಸ್ತೆ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ನೆಗಳಗುಳಿಯ ಯುವಕ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ  ರಸ್ತೆಯ ಸ್ಥಿತಿಗತಿಯ ಬಗ್ಗೆ ತಿಳಿಸಿ ಅನುದಾನ ಬಿಡುಗಡೆಗೊಳಿಸುವಂತೆ ಕೋರಿ ಮನವಿ ಮಾಡಿದರು, ಈ ಮನವಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿ ಕಾರ್ಯಾಲಯವು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಈ ರಸ್ತೆಯನ್ನು ತಕ್ಷಣ ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳಲು ವರದಿಯನ್ನು ನೀಡಿತು. ಈ ಮನವಿಯನ್ನು ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಮಂಗಳೂರು,ಅಳಿಕೆ ಗ್ರಾಮ ಪಂಚಾಯತ್ ಗೆ ಈ ರಸ್ತೆಯನ್ನು ಪರಿಶೀಲಿಸಿ ಕ್ರಮ ಕೆಗೊಳ್ಳಲು ತಿಳಿಸಿತು. ಆದರೆ ಈ ರಸ್ತೆಗೆ ಅಭಿವೃದ್ಧಿಗೆ ಪಂಚಾಯತ್‌ ನಲ್ಲಿ ಬೇಕಾದ ಅನುದಾನವಿಲ್ಲ ಎಂದು ತಿಳಿಸಿತು.

ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗ ಮಂಗಳೂರು ಈ ರಸ್ತೆಯು 1.50 ಕಿ.ಮೀ ಉದ್ದವಿದ್ದು ಇದಕ್ಕಾಗಿ ಅಂದಾಜು 105 ಲಕ್ಷ ವೆಚ್ಚವಾಗುತ್ತದೆ ಈ ಕಡತವನ್ನು ಜಿಲ್ಲಾ ಪಂಚಾಯತ್ ಮಂಗಳೂರಿಗೆ ಕಳುಹಿಸಲಾಗಿದೆ. ರಸ್ತೆ ದುರಸ್ತಿಗೆ ಬೇಕಾದ ಈ ಮೊತ್ತ ತಮ್ಮಲ್ಲಿ ಇಲ್ಲ ಹಾಗೂ ಈ ಕಡತವನ್ನು ಕರ್ನಾಟಕ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು. 2017 ರಲ್ಲಿ ಈ ರಸ್ತೆ ದುರಸ್ತಿಯ ಬಗ್ಗೆ ತಯಾರಾದ  ಸರ್ಕಾರದ ಕಡತ ವಿಧಾನ ಸೌದದಲ್ಲಿ ಇದ್ದು ಈ ರಸ್ತೆ ದುರಸ್ಥಿಯ ಕಡತದ ದ ಬಗ್ಗೆ ಸ್ಥಳೀಯ ಶಾಸಕರಲ್ಲಿ ಹಲವು ಬಾರಿ ಮನವಿ ಮಾಡಿದರೂ ಯಾವುದು ಫಲ ಕಾಣಲಿಲ್ಲ.

ಊರಿನ ನಾಗರಿಕರು ಈ ರಸ್ತೆಯ ದುರಸ್ಥಿಯುು ತಕ್ಷಣ ಆಗಬೇಕೆಂದು ಒಂದು ನೆಗಳಗುಳಿ ರಸ್ತೆ ಹಿತರಕ್ಷಣಾ ವೇದಿಕೆಯನ್ನು ಮಾಡಿಕೊಂಡು ಈ ರಸ್ತೆಯ ಅಭಿವೃದ್ಧಿಯು ಆಗದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಹಾಗೂ  ಹೋರಾಟಕ್ಕೆ ಮುಂದಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

9 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

10 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

23 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago