Advertisement
ರಾಜ್ಯ

ಉದನೆಯಲ್ಲಿ ಗಣಪತಿ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ | ಗಣಪತಿ ವಿಸರ್ಜನೆ ಬಳಿಕ ನಡೆದ ಘಟನೆ |

Share
ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಗಣಪತಿ ಕಟ್ಟೆಯನ್ನು ದುಷ್ಕರ್ಮಿಗಳು ಶುಕ್ರವಾರ ರಾತ್ರಿ ವೇಳೆ  ಹಾನಿಗೊಳಿಸಿರುವ ಘಟನೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ಭಕ್ತಾದಿಗಳು ಆಗಮಿಸಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಶುಕ್ರವಾರ ಗಣೇಶೋತ್ಸವ ಅಚರಿಸಲ್ಪಟ್ಟ  ಗಣಪತಿ ಕಟ್ಟೆಯನ್ನು ದುಷ್ಕರ್ಮಿಗಳು ರಾತ್ರಿ ವೇಳೆ  ಹಾನಿಗೊಳಿಸಿದ್ದಾರೆ. ಗಣೇಶೋತ್ಸವದ ಪ್ರಯುಕ್ತ  ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಬಾಳೆಗಿಡಗಳನ್ನು ಪುಡಿಗೈಯ್ಯಲಾಗಿದ್ದು ಮೆಟ್ಟಿಲನ್ನು ಹಾನಿಗೊಳಿಸಲಾಗಿದೆ. ಮೆಟ್ಟಿಲು ಹಾನಿಗೊಳಿಸಿರುವುದಾಗಿ ಕಂಡು ಬಂದಿದೆ. ಸ್ಥಳದಲ್ಲಿ ಕಲ್ಲುಗಳು ಕೂಡಾ ಕಂಡುಬಂದಿದೆ.  ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉದನೆಯ ಈ ಪ್ರದೇಶದಲ್ಲಿ  ಪ್ರತಿ ವರ್ಷ ಗಣೇಶ ಚತುರ್ಥಿಯಂದು ಸಾರ್ವಜನಿಕ ಗಣೇಶೋತ್ಸವವನ್ನು ಸ್ಥಳೀಯ ಸಮಿತಿಯೂ ಆಯೋಜಿಸುತ್ತದೆ. ಇದಕ್ಕಾಗಿ ಗಣಪತಿ ಕಟ್ಟೆಯೂ ಇದೆ. ಈ ಬಾರಿ  19 ನೇ ವರ್ಷದ ಗಣೇಶೋತ್ಸವ ಸರಳವಾಗಿ ಆಚರಿಸಿ  ಸಂಜೆಯ ವೇಳೆಗೆ ಗಣಪತಿ ಮೂರ್ತಿಯ ವಿಸರ್ಜನೆಯನ್ನು ನಡೆಸಲಾಗಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

5 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

14 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

15 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

19 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago