Advertisement
MIRROR FOCUS

ನೇಪಾಳದಲ್ಲಿ ಕೈಗಾರಿಕಾ ಬಳಕೆಗೆ ಅಡಿಕೆ, ಏಲಕ್ಕಿ, ಕಾಳುಮೆಣಸು ಆಮದುಗೆ ಅನುಮತಿ

Share

ನೇಪಾಳ ಸರ್ಕಾರವು ಈ ಆರ್ಥಿಕ ವರ್ಷಕ್ಕೆ ಕೈಗಾರಿಕಾ ಉದ್ದೇಶಕ್ಕಾಗಿ ಅಡಿಕೆ , ಏಲಕ್ಕಿ , ಕಪ್ಪು ಮತ್ತು ಬಿಳಿ ಕಾಳುಮೆಣಸು ಆಮದುಗೆ ಅಧಿಕೃತ ಅನುಮತಿ ನೀಡಿದೆ. ಆದರೆ ಆಮದು ಮಾಡಲು ಇಚ್ಛಿಸುವ ಕೈಗಾರಿಕೆಗಳು ಉದ್ಯಮ ಇಲಾಖೆ (Department of Industry)ಯಿಂದ ಕಡ್ಡಾಯ ಅನುಮೋದನೆ ಪಡೆಯಬೇಕು. ಇಲಾಖೆಯು ಕೈಗಾರಿಕಾ ಅವಶ್ಯಕತೆ, ದೇಶೀಯ ಲಭ್ಯತೆ ಹಾಗೂ ಅಗತ್ಯ ಪ್ರಮಾಣವನ್ನು ಪರಿಶೀಲಿಸಿ ಅನುಮತಿ ನೀಡಲಿದೆ.

ಹೊಸವಾಗಿ ಸ್ಥಾಪಿತವಾಗಿರುವ ಕೈಗಾರಿಕೆಗಳು ತಮ್ಮ ಉದ್ಯಮ ನೋಂದಣಿ ದಾಖಲೆಗಳು, ತೆರಿಗೆ ವಿವರಗಳು ಹಾಗೂ ಉತ್ಪಾದನಾ ಯೋಜನೆಗಳನ್ನು ಸಲ್ಲಿಸಬೇಕಾಗುತ್ತದೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳು ಹಿಂದಿನ ವರ್ಷಗಳಲ್ಲಿ ಮಾಡಿರುವ ಆಮದು ಪ್ರಮಾಣ ಮತ್ತು ಬಳಕೆಯ ವಿವರಗಳನ್ನು ನೀಡುವುದು ಕಡ್ಡಾಯವಾಗಿದೆ ಎಂದು ಸರ್ಕಾರ ತಿಳಿಸಿದೆ. ಸರ್ಕಾರದ ಪ್ರಕಾರ, ಈ ಕ್ರಮವು ಆಮದು ಪದಾರ್ಥಗಳ ಸರಿಯಾದ ಕೈಗಾರಿಕಾ ಬಳಕೆಯನ್ನು ಖಚಿತಪಡಿಸುವುದು, ಅಕ್ರಮ ವ್ಯಾಪಾರವನ್ನು ನಿಯಂತ್ರಿಸುವುದು ಹಾಗೂ ದೇಶೀಯ ಉತ್ಪಾದನೆ ಮತ್ತು ಮೌಲ್ಯವರ್ಧಿತ ಕೈಗಾರಿಕೆಗಳಿಗೆ ಬೆಂಬಲ ನೀಡುವುದು ಎಂಬ ಉದ್ದೇಶ ಹೊಂದಿದೆ.

ನೇಪಾಳದ ಆಮದು ನಿರ್ಧಾರವು ಭಾರತದ ಅಡಿಕೆ ಮಾರುಕಟ್ಟೆಗೆ ಪರಿಣಾಮ ಬೀರಲಿದೆಯೇ ಎಂಬುದು ಈಗಿನ ಪ್ರಶ್ನೆ. ನೇಪಾಳ ಸರ್ಕಾರ ಕೈಗಾರಿಕಾ ಉದ್ದೇಶಕ್ಕಾಗಿ ಅಡಿಕೆ ಆಮದುಗೆ ಅಧಿಕೃತ ಅನುಮತಿ ನೀಡಿರುವುದು ದಕ್ಷಿಣ ಏಷ್ಯಾದ ಅಡಿಕೆ ವ್ಯಾಪಾರದಲ್ಲಿ ಹೊಸ ಸಂಚಲನ ತಂದಿದೆ. ಇದರಿಂದ ಭಾರತ, ವಿಶೇಷವಾಗಿ ಕರ್ನಾಟಕ ಮತ್ತು ಕೇರಳದ ಅಡಿಕೆ ಮಾರುಕಟ್ಟೆಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಭಾರತ ಮತ್ತು ನೇಪಾಳ ನಡುವೆ ಮುಕ್ತ ಗಡಿ ವ್ಯಾಪಾರ ಇರುವುದರಿಂದ, ನೇಪಾಳಕ್ಕೆ ಆಮದುಗೊಳ್ಳುವ ಅಡಿಕೆಯ ಒಂದು ಭಾಗ ಮರುರಪ್ತಾಗಿ ಭಾರತಕ್ಕೆ ಹರಿದುಬರುವ ಅಪಾಯ ಇರುತ್ತದೆ. ಕೈಗಾರಿಕಾ ಬಳಕೆ ಎಂದು ಆಮದು ಮಾಡಿದ ಅಡಿಕೆ,  ಅಕ್ರಮವಾಗಿ ಭಾರತೀಯ ಮಾರುಕಟ್ಟೆಗೆ ಪ್ರವೇಶಿಸಿದರೆ ಸ್ಥಳೀಯ ಉತ್ಪಾದಕರಿಗೆ ಬೆಲೆ ಕುಸಿತ ಉಂಟಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಭಾರತ ಕೆಲವು ದೇಶಗಳಿಗೆ ಅಡಿಕೆ ರಫ್ತು ಮಾಡುತ್ತದೆ.  ನೇಪಾಳದಲ್ಲಿ ಕೈಗಾರಿಕೆಗಳಿಗೆ ಅಧಿಕೃತ ಆಮದು ಅವಕಾಶ ನೀಡಿದರೆ, ನೇಪಾಳ ಮಾರುಕಟ್ಟೆಯಲ್ಲಿ ಭಾರತೀಯ ಅಡಿಕೆಗೆ ಬೇಡಿಕೆ ಕಡಿಮೆಯಾಗಬಹುದು ಹಾಗೂ ಆಮದು ಅಡಿಕೆಯ ಮೇಲಿನ ಅವಲಂಬನೆ ಹೆಚ್ಚಬಹುದು, ಇದರಿಂದ ಭಾರತದ ರಫ್ತು ಅವಕಾಶ ಕಡಿಮೆಯಾಗುವ ಸಾಧ್ಯತೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

7 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

13 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

14 hours ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

14 hours ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

20 hours ago