ಆರೋಗ್ಯಾಲಯ

ನೇರಳೆ ಹಣ್ಣಿನಲ್ಲಿ ಔಷಧೀಯ ಗುಣಗಳಿವೆ ಬಹಳ…

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೇರಳೆ ಹಣ್ಣಿನ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ. ಆದರೆ ಅದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ಎಷ್ಟೋ ಜನರಿಗೆ ತಿಳಿದಿಲ್ಲ. ನಮ್ಮ ಕರಾವಳಿ ಭಾಗದಲ್ಲಿ ಕಾಡಿನಲ್ಲಿ ಯಥೇಚ್ಛವಾಗಿ ಸಿಕ್ಕಿದ್ರು ಅದನ್ನು ತಿನ್ನುವವರು ವಿರಳ. ಬೆಂಗಳೂರಿನಂತ ನಗರ ಪ್ರದೇಶಗಳಲ್ಲಿ ಇದನ್ನು ದುಬಾರಿ ಹಣ ತೆತ್ತು ಖರೀದಿ ಮಾಡಿತ್ತಾರೆ‌.
ಇದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ಸುಮನಾ ಮಳಲಗದ್ದೆ ಅವರು ಬರೆದ ಲೇಖನ ಇಲ್ಲಿದೆ..

Advertisement

ಫೆಬ್ರವರಿ ,ಮಾರ್ಚ್, ಎಪ್ರಿಲ್ ತಿಂಗಳುಗಳಲ್ಲಿ ಸಿಕ್ಕುವ ಹಣ್ಣು ತಿನ್ನಲು ಯೋಗ್ಯ. ಒಂದು ಜಾತಿಯ ನೇರಳೆ ಗಾತ್ರದಲ್ಲಿ ದೊಡ್ಡ ಬೇಳೆಯುವುದು ಮೇ,ಜೂನ್ ತಿಂಗಳಲ್ಲಿ ಇದು ಗಂಟಲು ನೋವು ಉಂಟುಮಾಡುತ್ತದೆ. ನಮ್ಮಲ್ಲಿ ಇದನ್ನು ಗಂಟಲಗಳಲೆ ಅಂತ ಕರೀತಾರೆ.

ಎಲೆ,ಚಕ್ಕೆ,ಬೀಜ, ಹಣ್ಣು ಗಳಲ್ಲಿ ಔಷಧಿ ಗುಣ ತುಂಬಾ ಇದೆ.
1)ಪಕ್ವಗೊಂಡ ಹಣವನ್ನು ಸ್ವಚ್ಚ ಮಾಡಿ ನೆರಳಲ್ಲಿ ಒಣಗಿಸಿ ಪುಡಿ ಮಾಡಿ ಮಾವಿನ ವಾಟೆಯ ಪುಡಿಯನ್ನು ಸೇರಿಸಿ ಹುರಿದು ಸಮಪ್ರಮಾಣದಲ್ಲಿ ಅಳಲೆಕಾಯಿ ಪುಡಿ ಸೇರಿಸಿ ತೆಗೆದು ಕೊಳ್ಳುವುದರಿಂದ ಹಳೆಯ ಆಮಶಂಕೆ ,ಬೇದಿ ಗುಣವಾಗುತ್ತದೆ.

2)ಸುಮಾರು 50ರಿಂದ 60 ಗ್ರಾಂ ಹಣ್ಣನ್ನು 250ಗ್ರಾಂ ನೀರುಹಾಕಿ ಕುದಿಸಿ ಮುಚ್ಚಿ ಇಡಿ. ಅರ್ಧ ಗಂಟೆಯ ನಂತರ ಕಿವುಚಿ ಸೋಸಿ ಇಟ್ಟುಕೊಂಡು ದಿನಕ್ಕೆ ಮೂರು ಬಾರಿ ಕುಡಿಯಿರಿ ಹಣ್ಣಿನ ಸಿಜನ್ ಇರುವವರಿಗೆ. ಇದರಿಂದ ಶುಗರ್ ನಾರ್ಮಲ್ ಆಗುತ್ತದೆ.

3) ಸಿಜನ್ ನಲ್ಲಿ ಹಣ್ಣು ತಿನ್ನುವುದರಿಂದ ಹೊಟ್ಟೆಯಲ್ಲಿ ಸೇರಿಕೊಂಡ ಕೂದಲು ,ಕಬ್ಬಿಣದ ತುಂಡು …ಹೊರಗೆ ಬರಲು ಸಹಾಯಕ.

4)ಇದರ ಬೀಜವನ್ನು ಜೇನುತುಪ್ಪದಲ್ಲಿ ತೈದು ಅಂಜನ ಇಟ್ಟರೆ ಕಣ್ಣಿನ ದೃಷ್ಟಿ ದೋಷ ಮತ್ತು ಪೊರೆ ನಿವಾರಣೆ ಆಗುತ್ತದೆ.

5)ಇದರ ಬೀಜ ನೆರಳಿನಲ್ಲಿ ಒಣಗಿಸಿ ಕಬ್ಬಿಣದ ಪಾತ್ರೆಯಲ್ಲಿ ಹುರಿದು ಭಸ್ಮ ಮಾಡಿ ಅರ್ಧ ಚಮಚ ಭಸ್ಮ ವನ್ನು ಜೇನುತುಪ್ಪ ಸೇರಿಸಿ ನೆಕ್ಕುತ್ತಿದ್ದರೆ ಜ್ವರ ಮತ್ತು ಅದರಿಂದ ಆಗುವ ವಾಂತಿ ನಿಲ್ಲುತ್ತದೆ.

6)ಬೀಜವನ್ನು ತೈದು ಹಚ್ಚಿದರೆ ಮೊಡವೆ ಗುಣವಾಗುತ್ತದೆ.

7)ಬೀಜವನ್ನು ತೈದು ಹಚ್ಚಿದರೆ ಚಪ್ಪಲಿ ಕಚ್ಚಿ ಆದ ಗಾಯ ಗುಣವಾಗುತ್ತದೆ.

8)ಬೀಜದ ಪುಡಿಯನ್ನು ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆ ಹಾಕಿ ಕುದಿಸಿ ಸೋಸಿ ಕಿವಿ ಗೆ ಹಾಕಿದರೆ ಕರ್ಣಸ್ರಾವ ಗುಣವಾಗುತ್ತದೆ.

9) ಸಮಭಾಗ ನೇರಳೆ ಚಕ್ಕೆ ಮತ್ತು ಮಾವಿನ ಚಕ್ಕೆ ಅರೆಬರೆ ಕುಟ್ಟಿ ಚತುರ್ಥಾಂಶ ಕಷಾಯದಲ್ಲಿ ಜೀರಿಗೆ ಪುಡಿ ಮತ್ತು ದನಿಯಾ ಪುಡಿ ಸೇರಿಸಿ ದಿನಕ್ಕೆ ಮೂರು ಅಥವಾ ನಾಲ್ಕು ಬಾರಿ ಕೊಟ್ಟರೆ ಗರ್ಭಿಣಿ ಸ್ತ್ರೀಯರ ಅತಿಸಾರ ಗುಣವಾಗುತ್ತದೆ.ಏಕೆಂದರೆ ಇವರಿಗೆ ಆದಷ್ಟು ಕಾಳಜಿ ಬೇಕು.

10)ಚಕ್ಕೆಯ ಕಷಾಯದಲ್ಲಿ ಬಾಯಿ ಮುಕ್ಕಳಿಸುವುದರಿಂದ ಹಲ್ಲು ಗಟ್ಟಿಯಾಗಿ ಬಾಯಿ ಹುಣ್ಣು ಗುಣವಾಗುತ್ತದೆ.

11) ಎಲೆಗಳನ್ನು ಪೇಸ್ಟ್ ಮಾಡಿ ದುಷ್ಟ ವೃಣಗಳಿಗೆ ಲೇಪನ ಮಾಡುವುದರಿಂದ ಗುಣವಾಗುತ್ತದೆ.

12)ಎಲೆಗಳನ್ನು ಒಣಗಿಸಿ ಸುಟ್ಟು ಬೂದಿ ಮಾಡಿ ಸೈಂಧವ ಲವಣ ಸೇರಿಸಿ ಹಲ್ಲು ಉಜ್ಜಿದರೆ ಹಲ್ಲಿನ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗುತ್ತದೆ.

13) ಎಳೆಯ ಎಲೆಗಳನ್ನು ಸ್ವಲ್ಪ ನೀರು ಸೇರಿಸಿ ಅರೆದು ಬೆಲ್ಲ ಸೇರಿಸಿ ಸೇವಿಸಿದರೆ ಮೂಲವ್ಯಾಧಿ ಯ ರಕ್ತ ಸ್ರಾವ ನಿಲ್ಲುತ್ತದೆ.

14) ಎಲೆಯ ರಸತೆಗೆದು ಕೂದಲಿಗೆ ಹಚ್ಚಿದರೆ ಕೂದಲು ಉದುರುವುದು ನಿಲ್ಲುತ್ತದೆ ಮತ್ತು ಸೊಂಪಾಗಿ ಬೆಳೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

3 hours ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

4 hours ago

ಮನೆಗೆ 4 ರಿಂದ 6 ಬಾಗಿಲುಗಳು ಇದ್ದರೆ ಏನೆಲ್ಲಾ ಪ್ರಯೋಜನಗಳಿವೆ ..? ಹೀಗಿವೆ ಶುಭ, ಅಶುಭ ಫಲಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಆರೋಪ | ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ…

16 hours ago

ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ

ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ…

16 hours ago

ಹವಾಮಾನ ವರದಿ | 19-04-2025 | ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ

ಮಲೆನಾಡು-ಕರಾವಳಿ ಸೇರಿದಂತೆ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

16 hours ago