ಗ್ರಾಮೀಣ ಭಾಗದ ಇಂಟರ್ನೆಟ್‌ ಹಾಗೂ ಹತಾಶ ಮನಸ್ಥಿತಿ….! |

August 16, 2022
10:33 AM

ಡಿಜಿಟಲ್‌ ಇಂಡಿಯಾ ಗ್ರಾಮೀಣ ಭಾಗಕ್ಕೂ ಈಗ ತಲಪುತ್ತಿದೆ. ಇದರ ಪರಿಣಾಮವಾಗಿ ಹಳ್ಳಿ ಹಳ್ಳಿಗೂ ಕೇಬಲ್‌ ಮೂಲಕ ಇಂಟರ್ನೆಟ್‌ ಸೇವೆ ಲಭ್ಯವಾಗುತ್ತಿದೆ. ಕೆಲವು ಕಡೆ ಬಿ ಎಸ್‌ ಎನ್‌ ಎಲ್‌ ಸೇವೆಯಾದರೆ ಇನ್ನೂ ಹಲವು ಕಡೆ ಖಾಸಗಿ ನೆಟ್ವರ್ಕ್.‌ ಹಳ್ಳಿಗಳಲ್ಲಿ ಇಂಟರ್ನೆಟ್‌ ಸೇವೆ ನೀಡುವುದು  ಸವಾಲಿನ ಕೆಲಸ. ಈ ಸವಾಲನ್ನು ಸ್ವೀಕರಿಸಿ ಅನೇಕ ಸಂಸ್ಥೆಗಳು ಸೇವೆ ನೀಡುತ್ತಿವೆ. ಆದರೆ ಈಚೆಗೆ ಹಳ್ಳಿಗಳಲ್ಲಿ ಇಂತಹ ಸೇವೆಗೆ ತಡೆಯುಂಟು ಮಾಡುವ ಮನಸ್ಥಿತಿಯೂ ಹೆಚ್ಚುತ್ತಿದೆ. ಅದರಲ್ಲಿ ಸುಳ್ಯ ತಾಲೂಕಿನ ಮರ್ಕಂಜದಲ್ಲಿ ಆಗಾಗ ಇಂತಹ ಮನಸ್ಥಿತಿಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಯ ತಾಲೂಕಿನ ಮರ್ಕಂಜದ ಕಡೆಗೆ ಬರುವ  BBNL  ಇಂಟರ್ ನೆಟ್ ಕೇಬಲ್ ಅನ್ನು ಯಾರೋ ತುಂಡು ಮಾಡಿದ್ದರು. ಗ್ರಾಮೀಣ ಭಾಗದಲ್ಲಿಯೂ ಉತ್ತಮ ಸೇವೆ ಲಭ್ಯವಾಗುವಂತೆ ಒಂದು ಕಡೆ ಖಾಸಗಿ ಕಂಪನಿಗಳು ಪ್ರಯತ್ನ ಮಾಡಿದರೆ ಇನ್ನೊಂದು ಕಡೆ ಈ ಸೇವೆಯನ್ನು ಧಕ್ಕೆ ಉಂಟು ಮಾಡುವ ಪ್ರಯತ್ನವೂ ಜೊತೆಯಾಗಿಯೇ ನಡೆಯುತ್ತಿದೆ. BSNL ಹಾಗೂ BBNL ವತಿಯಿಂದ ಈಗ ಗ್ರಾಮೀಣ ಭಾಗಕ್ಕೂ ಕೇಬಲ್‌ ಮೂಲಕ, ಏರ್‌ ಫೈಬರ್‌ ಮೂಲಕ ಇಂಟರ್ನೆಟ್‌ ಸೇವೆ ನೀಡಲಾಗುತ್ತಿದೆ. ಹೆಚ್ಚಿನ ಕಡೆಗಳಲ್ಲಿ  BSNL ಪ್ರಾಂಚೈಸಿ ಮೂಲಕ ಖಾಸಗಿ ಸಂಸ್ಥೆಗಳು ಜನರಿಗೆ ಸೇವೆ ನೀಡುತ್ತಿದೆ. ಈಚೆಗೆ BBNL ಕೂಡಾ ಸುಳ್ಯದ ಹಲವು ಕಡೆಗಳಲ್ಲಿ ಗುಣಮಟ್ಟದ ಸೇವೆಯನ್ನೂ ನೀಡುತ್ತಿದೆ. ಹಳ್ಳಿಗಳಲ್ಲಿ  ಸೇವೆ ನೀಡುವುದೇ ಕಷ್ಟದ ಕೆಲಸ. ಅಂತಹದ್ದರಲ್ಲಿ ಸಾಧ್ಯವಾದಷ್ಟು ಗುಣಮಟ್ಟದ ಸೇವೆಯನ್ನು ಖಾಸಗಿ ಸಂಸ್ಥೆಗಳು ನೀಡುತ್ತಿವೆ. ಆದರೆ ಸೇವೆಯನ್ನು ತಡೆಯುಂಟು ಮಾಡುವ ಮನಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ಗ್ರಾಮಸ್ಥರು ತಂಡವೊಂದನ್ನು ರಚನೆ ಮಾಡಿ ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಸಿಸಿ ಕ್ಯಾಮಾರ ಅಳವಡಿಕೆ ಹಾಗೂ ಇನ್ನೂ ಕೆಲವು ಕಡೆ ತಂಡ ಮಾಡಿ ಗಮನಿಸುವ ಕೆಲಸಕ್ಕೆ ಇಳಿಸಿದ್ದಾರೆ. ಇಡೀ ದೇಶದಲ್ಲಿ ಡಿಜಿಟಲ್‌ ಇಂಡಿಯಾ ಸದ್ದು ಮಾಡುತ್ತಿರುವಾಗ ಹೀನ ಮನಸ್ಥಿತಿಗಳನ್ನು ಪತ್ತೆ ಮಾಡಬೇಕಿದೆ ಎಂಬುದು ಗ್ರಾಹಕರ ಪ್ರಯತ್ನವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror