Advertisement
ಸುದ್ದಿಗಳು

ಗ್ರಾಮೀಣ ಭಾಗದ ಇಂಟರ್ನೆಟ್‌ ಹಾಗೂ ಹತಾಶ ಮನಸ್ಥಿತಿ….! |

Share

ಡಿಜಿಟಲ್‌ ಇಂಡಿಯಾ ಗ್ರಾಮೀಣ ಭಾಗಕ್ಕೂ ಈಗ ತಲಪುತ್ತಿದೆ. ಇದರ ಪರಿಣಾಮವಾಗಿ ಹಳ್ಳಿ ಹಳ್ಳಿಗೂ ಕೇಬಲ್‌ ಮೂಲಕ ಇಂಟರ್ನೆಟ್‌ ಸೇವೆ ಲಭ್ಯವಾಗುತ್ತಿದೆ. ಕೆಲವು ಕಡೆ ಬಿ ಎಸ್‌ ಎನ್‌ ಎಲ್‌ ಸೇವೆಯಾದರೆ ಇನ್ನೂ ಹಲವು ಕಡೆ ಖಾಸಗಿ ನೆಟ್ವರ್ಕ್.‌ ಹಳ್ಳಿಗಳಲ್ಲಿ ಇಂಟರ್ನೆಟ್‌ ಸೇವೆ ನೀಡುವುದು  ಸವಾಲಿನ ಕೆಲಸ. ಈ ಸವಾಲನ್ನು ಸ್ವೀಕರಿಸಿ ಅನೇಕ ಸಂಸ್ಥೆಗಳು ಸೇವೆ ನೀಡುತ್ತಿವೆ. ಆದರೆ ಈಚೆಗೆ ಹಳ್ಳಿಗಳಲ್ಲಿ ಇಂತಹ ಸೇವೆಗೆ ತಡೆಯುಂಟು ಮಾಡುವ ಮನಸ್ಥಿತಿಯೂ ಹೆಚ್ಚುತ್ತಿದೆ. ಅದರಲ್ಲಿ ಸುಳ್ಯ ತಾಲೂಕಿನ ಮರ್ಕಂಜದಲ್ಲಿ ಆಗಾಗ ಇಂತಹ ಮನಸ್ಥಿತಿಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement

ಸುಳ್ಯ ತಾಲೂಕಿನ ಮರ್ಕಂಜದ ಕಡೆಗೆ ಬರುವ  BBNL  ಇಂಟರ್ ನೆಟ್ ಕೇಬಲ್ ಅನ್ನು ಯಾರೋ ತುಂಡು ಮಾಡಿದ್ದರು. ಗ್ರಾಮೀಣ ಭಾಗದಲ್ಲಿಯೂ ಉತ್ತಮ ಸೇವೆ ಲಭ್ಯವಾಗುವಂತೆ ಒಂದು ಕಡೆ ಖಾಸಗಿ ಕಂಪನಿಗಳು ಪ್ರಯತ್ನ ಮಾಡಿದರೆ ಇನ್ನೊಂದು ಕಡೆ ಈ ಸೇವೆಯನ್ನು ಧಕ್ಕೆ ಉಂಟು ಮಾಡುವ ಪ್ರಯತ್ನವೂ ಜೊತೆಯಾಗಿಯೇ ನಡೆಯುತ್ತಿದೆ. BSNL ಹಾಗೂ BBNL ವತಿಯಿಂದ ಈಗ ಗ್ರಾಮೀಣ ಭಾಗಕ್ಕೂ ಕೇಬಲ್‌ ಮೂಲಕ, ಏರ್‌ ಫೈಬರ್‌ ಮೂಲಕ ಇಂಟರ್ನೆಟ್‌ ಸೇವೆ ನೀಡಲಾಗುತ್ತಿದೆ. ಹೆಚ್ಚಿನ ಕಡೆಗಳಲ್ಲಿ  BSNL ಪ್ರಾಂಚೈಸಿ ಮೂಲಕ ಖಾಸಗಿ ಸಂಸ್ಥೆಗಳು ಜನರಿಗೆ ಸೇವೆ ನೀಡುತ್ತಿದೆ. ಈಚೆಗೆ BBNL ಕೂಡಾ ಸುಳ್ಯದ ಹಲವು ಕಡೆಗಳಲ್ಲಿ ಗುಣಮಟ್ಟದ ಸೇವೆಯನ್ನೂ ನೀಡುತ್ತಿದೆ. ಹಳ್ಳಿಗಳಲ್ಲಿ  ಸೇವೆ ನೀಡುವುದೇ ಕಷ್ಟದ ಕೆಲಸ. ಅಂತಹದ್ದರಲ್ಲಿ ಸಾಧ್ಯವಾದಷ್ಟು ಗುಣಮಟ್ಟದ ಸೇವೆಯನ್ನು ಖಾಸಗಿ ಸಂಸ್ಥೆಗಳು ನೀಡುತ್ತಿವೆ. ಆದರೆ ಸೇವೆಯನ್ನು ತಡೆಯುಂಟು ಮಾಡುವ ಮನಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ಗ್ರಾಮಸ್ಥರು ತಂಡವೊಂದನ್ನು ರಚನೆ ಮಾಡಿ ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಸಿಸಿ ಕ್ಯಾಮಾರ ಅಳವಡಿಕೆ ಹಾಗೂ ಇನ್ನೂ ಕೆಲವು ಕಡೆ ತಂಡ ಮಾಡಿ ಗಮನಿಸುವ ಕೆಲಸಕ್ಕೆ ಇಳಿಸಿದ್ದಾರೆ. ಇಡೀ ದೇಶದಲ್ಲಿ ಡಿಜಿಟಲ್‌ ಇಂಡಿಯಾ ಸದ್ದು ಮಾಡುತ್ತಿರುವಾಗ ಹೀನ ಮನಸ್ಥಿತಿಗಳನ್ನು ಪತ್ತೆ ಮಾಡಬೇಕಿದೆ ಎಂಬುದು ಗ್ರಾಹಕರ ಪ್ರಯತ್ನವಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

10 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago