Advertisement
ಸುದ್ದಿಗಳು

ಗ್ರಾಮೀಣ ಭಾಗದ ಇಂಟರ್ನೆಟ್‌ ಹಾಗೂ ಹತಾಶ ಮನಸ್ಥಿತಿ….! |

Share

ಡಿಜಿಟಲ್‌ ಇಂಡಿಯಾ ಗ್ರಾಮೀಣ ಭಾಗಕ್ಕೂ ಈಗ ತಲಪುತ್ತಿದೆ. ಇದರ ಪರಿಣಾಮವಾಗಿ ಹಳ್ಳಿ ಹಳ್ಳಿಗೂ ಕೇಬಲ್‌ ಮೂಲಕ ಇಂಟರ್ನೆಟ್‌ ಸೇವೆ ಲಭ್ಯವಾಗುತ್ತಿದೆ. ಕೆಲವು ಕಡೆ ಬಿ ಎಸ್‌ ಎನ್‌ ಎಲ್‌ ಸೇವೆಯಾದರೆ ಇನ್ನೂ ಹಲವು ಕಡೆ ಖಾಸಗಿ ನೆಟ್ವರ್ಕ್.‌ ಹಳ್ಳಿಗಳಲ್ಲಿ ಇಂಟರ್ನೆಟ್‌ ಸೇವೆ ನೀಡುವುದು  ಸವಾಲಿನ ಕೆಲಸ. ಈ ಸವಾಲನ್ನು ಸ್ವೀಕರಿಸಿ ಅನೇಕ ಸಂಸ್ಥೆಗಳು ಸೇವೆ ನೀಡುತ್ತಿವೆ. ಆದರೆ ಈಚೆಗೆ ಹಳ್ಳಿಗಳಲ್ಲಿ ಇಂತಹ ಸೇವೆಗೆ ತಡೆಯುಂಟು ಮಾಡುವ ಮನಸ್ಥಿತಿಯೂ ಹೆಚ್ಚುತ್ತಿದೆ. ಅದರಲ್ಲಿ ಸುಳ್ಯ ತಾಲೂಕಿನ ಮರ್ಕಂಜದಲ್ಲಿ ಆಗಾಗ ಇಂತಹ ಮನಸ್ಥಿತಿಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಯ ತಾಲೂಕಿನ ಮರ್ಕಂಜದ ಕಡೆಗೆ ಬರುವ  BBNL  ಇಂಟರ್ ನೆಟ್ ಕೇಬಲ್ ಅನ್ನು ಯಾರೋ ತುಂಡು ಮಾಡಿದ್ದರು. ಗ್ರಾಮೀಣ ಭಾಗದಲ್ಲಿಯೂ ಉತ್ತಮ ಸೇವೆ ಲಭ್ಯವಾಗುವಂತೆ ಒಂದು ಕಡೆ ಖಾಸಗಿ ಕಂಪನಿಗಳು ಪ್ರಯತ್ನ ಮಾಡಿದರೆ ಇನ್ನೊಂದು ಕಡೆ ಈ ಸೇವೆಯನ್ನು ಧಕ್ಕೆ ಉಂಟು ಮಾಡುವ ಪ್ರಯತ್ನವೂ ಜೊತೆಯಾಗಿಯೇ ನಡೆಯುತ್ತಿದೆ. BSNL ಹಾಗೂ BBNL ವತಿಯಿಂದ ಈಗ ಗ್ರಾಮೀಣ ಭಾಗಕ್ಕೂ ಕೇಬಲ್‌ ಮೂಲಕ, ಏರ್‌ ಫೈಬರ್‌ ಮೂಲಕ ಇಂಟರ್ನೆಟ್‌ ಸೇವೆ ನೀಡಲಾಗುತ್ತಿದೆ. ಹೆಚ್ಚಿನ ಕಡೆಗಳಲ್ಲಿ  BSNL ಪ್ರಾಂಚೈಸಿ ಮೂಲಕ ಖಾಸಗಿ ಸಂಸ್ಥೆಗಳು ಜನರಿಗೆ ಸೇವೆ ನೀಡುತ್ತಿದೆ. ಈಚೆಗೆ BBNL ಕೂಡಾ ಸುಳ್ಯದ ಹಲವು ಕಡೆಗಳಲ್ಲಿ ಗುಣಮಟ್ಟದ ಸೇವೆಯನ್ನೂ ನೀಡುತ್ತಿದೆ. ಹಳ್ಳಿಗಳಲ್ಲಿ  ಸೇವೆ ನೀಡುವುದೇ ಕಷ್ಟದ ಕೆಲಸ. ಅಂತಹದ್ದರಲ್ಲಿ ಸಾಧ್ಯವಾದಷ್ಟು ಗುಣಮಟ್ಟದ ಸೇವೆಯನ್ನು ಖಾಸಗಿ ಸಂಸ್ಥೆಗಳು ನೀಡುತ್ತಿವೆ. ಆದರೆ ಸೇವೆಯನ್ನು ತಡೆಯುಂಟು ಮಾಡುವ ಮನಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ಗ್ರಾಮಸ್ಥರು ತಂಡವೊಂದನ್ನು ರಚನೆ ಮಾಡಿ ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಸಿಸಿ ಕ್ಯಾಮಾರ ಅಳವಡಿಕೆ ಹಾಗೂ ಇನ್ನೂ ಕೆಲವು ಕಡೆ ತಂಡ ಮಾಡಿ ಗಮನಿಸುವ ಕೆಲಸಕ್ಕೆ ಇಳಿಸಿದ್ದಾರೆ. ಇಡೀ ದೇಶದಲ್ಲಿ ಡಿಜಿಟಲ್‌ ಇಂಡಿಯಾ ಸದ್ದು ಮಾಡುತ್ತಿರುವಾಗ ಹೀನ ಮನಸ್ಥಿತಿಗಳನ್ನು ಪತ್ತೆ ಮಾಡಬೇಕಿದೆ ಎಂಬುದು ಗ್ರಾಹಕರ ಪ್ರಯತ್ನವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

16 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

17 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

19 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

19 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago