Advertisement
ಸುದ್ದಿಗಳು

ಗ್ರಾಮೀಣ ಭಾಗದ ಇಂಟರ್ನೆಟ್‌ ಹಾಗೂ ಹತಾಶ ಮನಸ್ಥಿತಿ….! |

Share

ಡಿಜಿಟಲ್‌ ಇಂಡಿಯಾ ಗ್ರಾಮೀಣ ಭಾಗಕ್ಕೂ ಈಗ ತಲಪುತ್ತಿದೆ. ಇದರ ಪರಿಣಾಮವಾಗಿ ಹಳ್ಳಿ ಹಳ್ಳಿಗೂ ಕೇಬಲ್‌ ಮೂಲಕ ಇಂಟರ್ನೆಟ್‌ ಸೇವೆ ಲಭ್ಯವಾಗುತ್ತಿದೆ. ಕೆಲವು ಕಡೆ ಬಿ ಎಸ್‌ ಎನ್‌ ಎಲ್‌ ಸೇವೆಯಾದರೆ ಇನ್ನೂ ಹಲವು ಕಡೆ ಖಾಸಗಿ ನೆಟ್ವರ್ಕ್.‌ ಹಳ್ಳಿಗಳಲ್ಲಿ ಇಂಟರ್ನೆಟ್‌ ಸೇವೆ ನೀಡುವುದು  ಸವಾಲಿನ ಕೆಲಸ. ಈ ಸವಾಲನ್ನು ಸ್ವೀಕರಿಸಿ ಅನೇಕ ಸಂಸ್ಥೆಗಳು ಸೇವೆ ನೀಡುತ್ತಿವೆ. ಆದರೆ ಈಚೆಗೆ ಹಳ್ಳಿಗಳಲ್ಲಿ ಇಂತಹ ಸೇವೆಗೆ ತಡೆಯುಂಟು ಮಾಡುವ ಮನಸ್ಥಿತಿಯೂ ಹೆಚ್ಚುತ್ತಿದೆ. ಅದರಲ್ಲಿ ಸುಳ್ಯ ತಾಲೂಕಿನ ಮರ್ಕಂಜದಲ್ಲಿ ಆಗಾಗ ಇಂತಹ ಮನಸ್ಥಿತಿಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಯ ತಾಲೂಕಿನ ಮರ್ಕಂಜದ ಕಡೆಗೆ ಬರುವ  BBNL  ಇಂಟರ್ ನೆಟ್ ಕೇಬಲ್ ಅನ್ನು ಯಾರೋ ತುಂಡು ಮಾಡಿದ್ದರು. ಗ್ರಾಮೀಣ ಭಾಗದಲ್ಲಿಯೂ ಉತ್ತಮ ಸೇವೆ ಲಭ್ಯವಾಗುವಂತೆ ಒಂದು ಕಡೆ ಖಾಸಗಿ ಕಂಪನಿಗಳು ಪ್ರಯತ್ನ ಮಾಡಿದರೆ ಇನ್ನೊಂದು ಕಡೆ ಈ ಸೇವೆಯನ್ನು ಧಕ್ಕೆ ಉಂಟು ಮಾಡುವ ಪ್ರಯತ್ನವೂ ಜೊತೆಯಾಗಿಯೇ ನಡೆಯುತ್ತಿದೆ. BSNL ಹಾಗೂ BBNL ವತಿಯಿಂದ ಈಗ ಗ್ರಾಮೀಣ ಭಾಗಕ್ಕೂ ಕೇಬಲ್‌ ಮೂಲಕ, ಏರ್‌ ಫೈಬರ್‌ ಮೂಲಕ ಇಂಟರ್ನೆಟ್‌ ಸೇವೆ ನೀಡಲಾಗುತ್ತಿದೆ. ಹೆಚ್ಚಿನ ಕಡೆಗಳಲ್ಲಿ  BSNL ಪ್ರಾಂಚೈಸಿ ಮೂಲಕ ಖಾಸಗಿ ಸಂಸ್ಥೆಗಳು ಜನರಿಗೆ ಸೇವೆ ನೀಡುತ್ತಿದೆ. ಈಚೆಗೆ BBNL ಕೂಡಾ ಸುಳ್ಯದ ಹಲವು ಕಡೆಗಳಲ್ಲಿ ಗುಣಮಟ್ಟದ ಸೇವೆಯನ್ನೂ ನೀಡುತ್ತಿದೆ. ಹಳ್ಳಿಗಳಲ್ಲಿ  ಸೇವೆ ನೀಡುವುದೇ ಕಷ್ಟದ ಕೆಲಸ. ಅಂತಹದ್ದರಲ್ಲಿ ಸಾಧ್ಯವಾದಷ್ಟು ಗುಣಮಟ್ಟದ ಸೇವೆಯನ್ನು ಖಾಸಗಿ ಸಂಸ್ಥೆಗಳು ನೀಡುತ್ತಿವೆ. ಆದರೆ ಸೇವೆಯನ್ನು ತಡೆಯುಂಟು ಮಾಡುವ ಮನಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ಗ್ರಾಮಸ್ಥರು ತಂಡವೊಂದನ್ನು ರಚನೆ ಮಾಡಿ ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಸಿಸಿ ಕ್ಯಾಮಾರ ಅಳವಡಿಕೆ ಹಾಗೂ ಇನ್ನೂ ಕೆಲವು ಕಡೆ ತಂಡ ಮಾಡಿ ಗಮನಿಸುವ ಕೆಲಸಕ್ಕೆ ಇಳಿಸಿದ್ದಾರೆ. ಇಡೀ ದೇಶದಲ್ಲಿ ಡಿಜಿಟಲ್‌ ಇಂಡಿಯಾ ಸದ್ದು ಮಾಡುತ್ತಿರುವಾಗ ಹೀನ ಮನಸ್ಥಿತಿಗಳನ್ನು ಪತ್ತೆ ಮಾಡಬೇಕಿದೆ ಎಂಬುದು ಗ್ರಾಹಕರ ಪ್ರಯತ್ನವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

10 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago