Advertisement
ಸುದ್ದಿಗಳು

ಗ್ರಾಮೀಣ ಭಾಗದ ಇಂಟರ್ನೆಟ್‌ ಹಾಗೂ ಹತಾಶ ಮನಸ್ಥಿತಿ….! |

Share

ಡಿಜಿಟಲ್‌ ಇಂಡಿಯಾ ಗ್ರಾಮೀಣ ಭಾಗಕ್ಕೂ ಈಗ ತಲಪುತ್ತಿದೆ. ಇದರ ಪರಿಣಾಮವಾಗಿ ಹಳ್ಳಿ ಹಳ್ಳಿಗೂ ಕೇಬಲ್‌ ಮೂಲಕ ಇಂಟರ್ನೆಟ್‌ ಸೇವೆ ಲಭ್ಯವಾಗುತ್ತಿದೆ. ಕೆಲವು ಕಡೆ ಬಿ ಎಸ್‌ ಎನ್‌ ಎಲ್‌ ಸೇವೆಯಾದರೆ ಇನ್ನೂ ಹಲವು ಕಡೆ ಖಾಸಗಿ ನೆಟ್ವರ್ಕ್.‌ ಹಳ್ಳಿಗಳಲ್ಲಿ ಇಂಟರ್ನೆಟ್‌ ಸೇವೆ ನೀಡುವುದು  ಸವಾಲಿನ ಕೆಲಸ. ಈ ಸವಾಲನ್ನು ಸ್ವೀಕರಿಸಿ ಅನೇಕ ಸಂಸ್ಥೆಗಳು ಸೇವೆ ನೀಡುತ್ತಿವೆ. ಆದರೆ ಈಚೆಗೆ ಹಳ್ಳಿಗಳಲ್ಲಿ ಇಂತಹ ಸೇವೆಗೆ ತಡೆಯುಂಟು ಮಾಡುವ ಮನಸ್ಥಿತಿಯೂ ಹೆಚ್ಚುತ್ತಿದೆ. ಅದರಲ್ಲಿ ಸುಳ್ಯ ತಾಲೂಕಿನ ಮರ್ಕಂಜದಲ್ಲಿ ಆಗಾಗ ಇಂತಹ ಮನಸ್ಥಿತಿಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಯ ತಾಲೂಕಿನ ಮರ್ಕಂಜದ ಕಡೆಗೆ ಬರುವ  BBNL  ಇಂಟರ್ ನೆಟ್ ಕೇಬಲ್ ಅನ್ನು ಯಾರೋ ತುಂಡು ಮಾಡಿದ್ದರು. ಗ್ರಾಮೀಣ ಭಾಗದಲ್ಲಿಯೂ ಉತ್ತಮ ಸೇವೆ ಲಭ್ಯವಾಗುವಂತೆ ಒಂದು ಕಡೆ ಖಾಸಗಿ ಕಂಪನಿಗಳು ಪ್ರಯತ್ನ ಮಾಡಿದರೆ ಇನ್ನೊಂದು ಕಡೆ ಈ ಸೇವೆಯನ್ನು ಧಕ್ಕೆ ಉಂಟು ಮಾಡುವ ಪ್ರಯತ್ನವೂ ಜೊತೆಯಾಗಿಯೇ ನಡೆಯುತ್ತಿದೆ. BSNL ಹಾಗೂ BBNL ವತಿಯಿಂದ ಈಗ ಗ್ರಾಮೀಣ ಭಾಗಕ್ಕೂ ಕೇಬಲ್‌ ಮೂಲಕ, ಏರ್‌ ಫೈಬರ್‌ ಮೂಲಕ ಇಂಟರ್ನೆಟ್‌ ಸೇವೆ ನೀಡಲಾಗುತ್ತಿದೆ. ಹೆಚ್ಚಿನ ಕಡೆಗಳಲ್ಲಿ  BSNL ಪ್ರಾಂಚೈಸಿ ಮೂಲಕ ಖಾಸಗಿ ಸಂಸ್ಥೆಗಳು ಜನರಿಗೆ ಸೇವೆ ನೀಡುತ್ತಿದೆ. ಈಚೆಗೆ BBNL ಕೂಡಾ ಸುಳ್ಯದ ಹಲವು ಕಡೆಗಳಲ್ಲಿ ಗುಣಮಟ್ಟದ ಸೇವೆಯನ್ನೂ ನೀಡುತ್ತಿದೆ. ಹಳ್ಳಿಗಳಲ್ಲಿ  ಸೇವೆ ನೀಡುವುದೇ ಕಷ್ಟದ ಕೆಲಸ. ಅಂತಹದ್ದರಲ್ಲಿ ಸಾಧ್ಯವಾದಷ್ಟು ಗುಣಮಟ್ಟದ ಸೇವೆಯನ್ನು ಖಾಸಗಿ ಸಂಸ್ಥೆಗಳು ನೀಡುತ್ತಿವೆ. ಆದರೆ ಸೇವೆಯನ್ನು ತಡೆಯುಂಟು ಮಾಡುವ ಮನಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ಗ್ರಾಮಸ್ಥರು ತಂಡವೊಂದನ್ನು ರಚನೆ ಮಾಡಿ ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಸಿಸಿ ಕ್ಯಾಮಾರ ಅಳವಡಿಕೆ ಹಾಗೂ ಇನ್ನೂ ಕೆಲವು ಕಡೆ ತಂಡ ಮಾಡಿ ಗಮನಿಸುವ ಕೆಲಸಕ್ಕೆ ಇಳಿಸಿದ್ದಾರೆ. ಇಡೀ ದೇಶದಲ್ಲಿ ಡಿಜಿಟಲ್‌ ಇಂಡಿಯಾ ಸದ್ದು ಮಾಡುತ್ತಿರುವಾಗ ಹೀನ ಮನಸ್ಥಿತಿಗಳನ್ನು ಪತ್ತೆ ಮಾಡಬೇಕಿದೆ ಎಂಬುದು ಗ್ರಾಹಕರ ಪ್ರಯತ್ನವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

15 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

22 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

22 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

23 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago