Advertisement
ಸುದ್ದಿಗಳು

ಗ್ರಾಮೀಣ ಭಾಗದ ಇಂಟರ್ನೆಟ್‌ ಹಾಗೂ ಹತಾಶ ಮನಸ್ಥಿತಿ….! |

Share

ಡಿಜಿಟಲ್‌ ಇಂಡಿಯಾ ಗ್ರಾಮೀಣ ಭಾಗಕ್ಕೂ ಈಗ ತಲಪುತ್ತಿದೆ. ಇದರ ಪರಿಣಾಮವಾಗಿ ಹಳ್ಳಿ ಹಳ್ಳಿಗೂ ಕೇಬಲ್‌ ಮೂಲಕ ಇಂಟರ್ನೆಟ್‌ ಸೇವೆ ಲಭ್ಯವಾಗುತ್ತಿದೆ. ಕೆಲವು ಕಡೆ ಬಿ ಎಸ್‌ ಎನ್‌ ಎಲ್‌ ಸೇವೆಯಾದರೆ ಇನ್ನೂ ಹಲವು ಕಡೆ ಖಾಸಗಿ ನೆಟ್ವರ್ಕ್.‌ ಹಳ್ಳಿಗಳಲ್ಲಿ ಇಂಟರ್ನೆಟ್‌ ಸೇವೆ ನೀಡುವುದು  ಸವಾಲಿನ ಕೆಲಸ. ಈ ಸವಾಲನ್ನು ಸ್ವೀಕರಿಸಿ ಅನೇಕ ಸಂಸ್ಥೆಗಳು ಸೇವೆ ನೀಡುತ್ತಿವೆ. ಆದರೆ ಈಚೆಗೆ ಹಳ್ಳಿಗಳಲ್ಲಿ ಇಂತಹ ಸೇವೆಗೆ ತಡೆಯುಂಟು ಮಾಡುವ ಮನಸ್ಥಿತಿಯೂ ಹೆಚ್ಚುತ್ತಿದೆ. ಅದರಲ್ಲಿ ಸುಳ್ಯ ತಾಲೂಕಿನ ಮರ್ಕಂಜದಲ್ಲಿ ಆಗಾಗ ಇಂತಹ ಮನಸ್ಥಿತಿಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಯ ತಾಲೂಕಿನ ಮರ್ಕಂಜದ ಕಡೆಗೆ ಬರುವ  BBNL  ಇಂಟರ್ ನೆಟ್ ಕೇಬಲ್ ಅನ್ನು ಯಾರೋ ತುಂಡು ಮಾಡಿದ್ದರು. ಗ್ರಾಮೀಣ ಭಾಗದಲ್ಲಿಯೂ ಉತ್ತಮ ಸೇವೆ ಲಭ್ಯವಾಗುವಂತೆ ಒಂದು ಕಡೆ ಖಾಸಗಿ ಕಂಪನಿಗಳು ಪ್ರಯತ್ನ ಮಾಡಿದರೆ ಇನ್ನೊಂದು ಕಡೆ ಈ ಸೇವೆಯನ್ನು ಧಕ್ಕೆ ಉಂಟು ಮಾಡುವ ಪ್ರಯತ್ನವೂ ಜೊತೆಯಾಗಿಯೇ ನಡೆಯುತ್ತಿದೆ. BSNL ಹಾಗೂ BBNL ವತಿಯಿಂದ ಈಗ ಗ್ರಾಮೀಣ ಭಾಗಕ್ಕೂ ಕೇಬಲ್‌ ಮೂಲಕ, ಏರ್‌ ಫೈಬರ್‌ ಮೂಲಕ ಇಂಟರ್ನೆಟ್‌ ಸೇವೆ ನೀಡಲಾಗುತ್ತಿದೆ. ಹೆಚ್ಚಿನ ಕಡೆಗಳಲ್ಲಿ  BSNL ಪ್ರಾಂಚೈಸಿ ಮೂಲಕ ಖಾಸಗಿ ಸಂಸ್ಥೆಗಳು ಜನರಿಗೆ ಸೇವೆ ನೀಡುತ್ತಿದೆ. ಈಚೆಗೆ BBNL ಕೂಡಾ ಸುಳ್ಯದ ಹಲವು ಕಡೆಗಳಲ್ಲಿ ಗುಣಮಟ್ಟದ ಸೇವೆಯನ್ನೂ ನೀಡುತ್ತಿದೆ. ಹಳ್ಳಿಗಳಲ್ಲಿ  ಸೇವೆ ನೀಡುವುದೇ ಕಷ್ಟದ ಕೆಲಸ. ಅಂತಹದ್ದರಲ್ಲಿ ಸಾಧ್ಯವಾದಷ್ಟು ಗುಣಮಟ್ಟದ ಸೇವೆಯನ್ನು ಖಾಸಗಿ ಸಂಸ್ಥೆಗಳು ನೀಡುತ್ತಿವೆ. ಆದರೆ ಸೇವೆಯನ್ನು ತಡೆಯುಂಟು ಮಾಡುವ ಮನಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ಗ್ರಾಮಸ್ಥರು ತಂಡವೊಂದನ್ನು ರಚನೆ ಮಾಡಿ ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಸಿಸಿ ಕ್ಯಾಮಾರ ಅಳವಡಿಕೆ ಹಾಗೂ ಇನ್ನೂ ಕೆಲವು ಕಡೆ ತಂಡ ಮಾಡಿ ಗಮನಿಸುವ ಕೆಲಸಕ್ಕೆ ಇಳಿಸಿದ್ದಾರೆ. ಇಡೀ ದೇಶದಲ್ಲಿ ಡಿಜಿಟಲ್‌ ಇಂಡಿಯಾ ಸದ್ದು ಮಾಡುತ್ತಿರುವಾಗ ಹೀನ ಮನಸ್ಥಿತಿಗಳನ್ನು ಪತ್ತೆ ಮಾಡಬೇಕಿದೆ ಎಂಬುದು ಗ್ರಾಹಕರ ಪ್ರಯತ್ನವಾಗಿದೆ.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago