Advertisement
ಅಂಕಣ

ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್‌ ಸಮಸ್ಯೆ | ಆನ್‌ ಲೈನ್‌ ಕ್ಲಾಸಿಗೆ ಕೊಡೆ ಹಿಡಿದು ಕುಳಿತ ಹುಡುಗಿ…! | ಪ್ರಶ್ನೆಯಲ್ಲ, ಭರವಸೆಯೂ ಬೇಡ -ಪರಿಹಾರ ಹೇಗೆ ?

Share

ಗ್ರಾಮೀಣ ಭಾಗಗಳ ನೆಟ್ವರ್ಕ್‌ ಸಮಸ್ಯೆ ನಿವಾರಣೆಗೆ ಈಗಾಗಲೇ ಹಲವು ಸಭೆಗಳು ನಡೆದವು. ಅಚ್ಚರಿ ಎಂದರೆ ಸಭೆ ನಡೆದ ಮರುದಿನವೇ ನೆಟ್ವರ್ಕ್‌ ಗಳು ಅಯೋಮಯ….!. ಹಾಗಿದ್ದರೆ ಸಮಸ್ಯೆ ಇರುವುದು  ಎಲ್ಲಿ  ಎನ್ನುವುದು ಪತ್ತೆಯಾಗಬೇಕು. ಅದರ ಹೊರತಾಗಿ ಎಲ್ಲಾ ನಡೆಯುತ್ತದೆ ಎನ್ನುವುದೇ ಅಚ್ಚರಿ.

Advertisement
Advertisement

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ, ಬಳ್ಳಕ್ಕ ಪ್ರದೇಶದ ವಿದ್ಯಾರ್ಥಿನಿಯೊಬ್ಬಳು ಮಳೆಯ ನಡುವೆಯೇ ರಸ್ತೆ ಬದಿಗೆ ತಂದೆಯ ಜೊತೆಗೆ ಬಂದು ಕೊಡೆ ಹಿಡಿದು ಆನ್‌ ಲೈನ್‌ ಕ್ಲಾಸ್‌ ಕೇಳುತ್ತಾಳೆ. ಆಕೆ ಎಸ್‌ ಎಸ್‌ ಎಲ್‌ ಸಿ. ನೆಟ್ವರ್ಕ್‌ ಇಲ್ಲ, ಸಿಗ್ನಲ್‌ ಇಲ್ಲ ಎಂದು ಕೂತರೆ ಈಡೀ ಭವಿಷ್ಯವೇ ಹಾಳಾಗುತ್ತದೆ. ಮೊದಲೇ ಕೊರೋನಾ ಮಕ್ಕಳ ಭವಿಷ್ಯವನ್ನು ಹಾಳು ಮಾಡಿದೆ. ಈಗ ನೆಟ್ವರ್ಕ್‌ ಇಲ್ಲ, ಸಿಗ್ನಲ್‌ ಇಲ್ಲ ಎಂದು ಕೂತರೆ ಇಡೀ ಭವಿಷ್ಯದ ಚಿಂತೆ. ಹಾಗಾಗಿಯೇ ಆ ವಿದ್ಯಾರ್ಥಿನಿ ತಂದೆಯ ಜೊತೆಗೆ ರಸ್ತೆ ಬಂದು ಮಳೆಯ ನಡುವೆಯೇ ಪಾಠ ಕೇಳುತ್ತಾಳೆ, ಓದಲು ಬೇಕಾದ ಪಠ್ಯವನ್ನು ಡೌನ್ ಲೋಡ್‌ ಮಾಡುತ್ತಾಳೆ. ವಿಚಾರಿಸಿದರೆ ಹೇಳುತ್ತಾರೆ , ಸುಮಾರು  20 ಮಕ್ಕಳು ಹೀಗೇ ಪಾಠ ಕೇಳಲು ಗುಡ್ಡದ ತುದಿಗೆ ರಸ್ತೆಯ ಬದಿಗೆ ಬರುತ್ತಾರೆ…!. ಇದು ಗ್ರಾಮೀಣ ಭಾಗದ ಆನ್‌ ಲೈನ್‌ ಸ್ಟೋರಿ.

Advertisement

ಆ ಕಡೆ ನೋಡಿದರೆ ಸರಕಾರಗಳು ಜನಪ್ರತಿನಿಧಿಗಳು ಆಗಾಗ ಗ್ರಾಮೀಣ ಭಾಗದ ನೆಟ್ವರ್ಕ್‌ ಸಮಸ್ಯೆ ನಿವಾರಣೆಗೆ ಬೊಬ್ಬೆ ಹೊಡೆಯುತ್ತಾರೆ. ತಕ್ಷಣವೇ ಗ್ರಾಮೀಣ ಭಾಗಗಳ ನೆಟ್ವರ್ಕ್‌ ಸಮಸ್ಯೆ ನಿವಾರಣೆಯಾಗಬೇಕು ಎಂದು ಹೇಳುತ್ತಾರೆ. ಅದಾದ ಬಳಿಕ ಯಥಾ ಪ್ರಕಾರ ಪರಿಸ್ಥಿತಿ ಹಾಗೇ ಇರುತ್ತದೆ. ಜನರು ಮನವಿ ನೀಡಿದಾಕ್ಷಣ ಭರವಸೆ ನೀಡುತ್ತಾರೆ, ಅಲ್ಲಿಗೆ ಆ ಕತೆಯೂ ಮುಗಿಯಿತು..!. ನಿಜವಾಗಿಯೂ ಸಭೆಯ ಬದಲಾಗಿ ನಡೆಯಬೇಕಾದ್ದು ಮೂಲಭೂತ ಸಮಸ್ಯೆಗಳ ಪರಿಹಾರ. ಸರಕಾರಿ ಸ್ವಾಮ್ಯದ ಬಿ ಎಸ್‌ ಎನ್‌ ಎಲ್‌  ಟವರ್‌, ವಿನಿಮಯ ಕೇಂದ್ರಗಳಿಗೆ ಇಂದಿಗೂ ಸರಿಯಾಗಿ ಡೀಸೆಲ್‌ ಪೂರೈಕೆ ಆಗುತ್ತಿಲ್ಲ, ಬ್ಯಾಟರಿ, ಪವರ್‌ ಪ್ಲಾಂಟ್‌ ಸರಿ ಇಲ್ಲ. ವ್ಯವಸ್ಥಿತ ರೀತಿಯಲ್ಲಿ ವಿದ್ಯುತ್‌ ಸರಬರಾಜು ಕೂಡಾ ಇಲ್ಲ. ನೆಟ್ವರ್ಕಿಂಗ್‌ ವ್ಯವಸ್ಥೆ ಇನ್ನೂ ಸರಿ ಇಲ್ಲ. ಯಾವುದೇ ವಿನಿಮಯ ಕೇಂದ್ರ ಆಫ್‌ ಆದಾಗ ಇಡೀ ವ್ಯವಸ್ಥೆ ಹದಗೆಡುತ್ತದೆ, ಬಹುದೊಡ್ಡ ಕೇಬಲ್‌ ಜಾಲ ಹೊಂದಿರುವ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕಿಂಗ್‌ ಸಮಸ್ಯೆ ಇನ್ನೂ ಇದೆ. ತಾಂತ್ರಿಕವಾಗಿ ಬಹಳ ಹಿಂದಿದೆ. ಖಾಸಗೀಕರಣದ ಭರಾಟೆಯಲ್ಲಿ ಈಗಲೂ ಮೂಲಭೂತ ವ್ಯವಸ್ಥೆಗಳ ಪೂರೈಕೆಯೇ ಆಗುತ್ತಿಲ್ಲ.

ಇನ್ನು ಖಾಸಗಿ ಸಂಸ್ಥೆಗಳು ನಷ್ಟದ ಹಾದಿಗೆ ಎಂದಿಗೂ ಹಿಡಿಯುವುದಿಲ್ಲ. ಅಲ್ಲಿ ಸೇವೆಯೇ ಮುಖ್ಯ ಉದ್ದೇಶವಲ್ಲ, ಲಾಭ ಇಲ್ಲದೇ ಇದ್ದರೆ ಯಾವುದೇ ಖಾಸಗೀ ಸಂಸ್ಥೆಗಳು ಲಕ್ಷ ಲಕ್ಷ ಸುರಿದ ನಷ್ಟ ಮಾಡಿಕೊಳ್ಳಲು ಸಿದ್ಧರಿಲ್ಲ. ಅದರ ಜೊತೆಗೆ ಅಂತಹ ಖಾಸಗೀ ವ್ಯವಸ್ಥೆಗಳಿಗೂ ಮೂಲಭೂತವಾದ ವ್ಯವಸ್ಥೆ ಒದಗಿಸಲು ಪಂಚಾಯತ್‌ ಮಟ್ಟದಿಂದಲೂ ಸಹಕಾರ ಇಲ್ಲ. ಹೀಗಾಗಿ ಗ್ರಾಮೀಣ ಭಾಗದ ಕಡೆಗೆ ಸೇವೆಗೆ ಖಾಸಗಿ ಸಂಸ್ಥೆಗಳೂ ಮುಂದೆ ಬರುತ್ತಿಲ್ಲ. ಅದಕ್ಕೆ ಅರಣ್ಯ, ಜನಸಂಖ್ಯೆ ಕೊರತೆ ಇತ್ಯಾದಿ ಕಾರಣಗಳನ್ನು  ನೀಡುತ್ತವೆ.

Advertisement

ಈಚೆಗೆ ಮೊಬೈಲ್‌ ನೆಟ್ವರ್ಕ್‌ ಸುಧಾರಣೆಗಾಗಿ ಪ್ರಧಾನಿಗಳವರೆಗೆ ಪತ್ರ ಬರೆದು ಹಿಂಬರಹ ಬಂದಿರುವ ಹಾಗೂ ವಿವಿಧ ಮಾಧ್ಯಮಗಳಲ್ಲೂ ಪ್ರಕಟವಾಗಿರುವ ವರದಿಯ ಪರಿಣಾಮದಿಂದ ಹಿಂಬರಹ ಬಂದಿತೇ ವಿನಃ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳುವ ವಿನಾಯಕ್‌ ಅವರು ಜನಪ್ರತಿನಿಧಿಗಳು ಈ ಬಗ್ಗೆ ತಾಂತ್ರಿಕ ಸಲಹೆ ಪಡೆದು ಕೆಲಸ ಮಾಡಿದರೆ ಯಶಸ್ಸು ಸಾಧ್ಯವಿದೆ. ಬಿ ಎಸ್‌ ಎನ್‌ ಎಲ್‌ ಸಂಸ್ಥೆಯಿಂದಲೇ ಗ್ರಾಮೀಣ ಭಾಗದಲ್ಲೂ ಉತ್ತಮ ಸೇವೆ ಪಡೆಯಲು ಸಾದ್ಯವಿದೆ ಎನ್ನುತ್ತಾರೆ.

ಅನಗತ್ಯವಾಗಿ ಗ್ರಾಮೀಣ ಭಾಗಗಳ ನೆಟ್ವರ್ಕ್‌ ಸಮಸ್ಯೆ ಪರಿಹಾರ ಎಂದು ಜನರನ್ನು  ಮತ್ತೆ ಮತ್ತೆ ನಂಬಿಸುವ ನಾಟಕ  ಮಾಡುವ  ಬದಲಾಗಿ ಸಮಸ್ಯೆ ಪರಿಹಾರಕ್ಕೆ ತಾಂತ್ರಿಕವಾದ ಸಲಹೆಯೊಂದಿಗೆ ಪರಿಹಾರ ಕಂಡುಕೊಳ್ಳುವುದು  ಸೂಕ್ತವಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

12 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

14 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago