Advertisement
MIRROR FOCUS

ಚಾಲಿ ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ 350 ರೂಪಾಯಿ ದರ ನಿಗದಿ

Share

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಇಂದಿನಿಂದ ಹೊಸ ಅಡಿಕೆಗೆ ದರ ನಿಗದಿಯಾಗಿದೆ. ಕ್ಯಾಂಪ್ಕೊ ಹಾಗೂ ಇತರ ಸಹಕಾರಿ ಸಂಸ್ಥೆಗಳು ಹೊಸ ಅಡಿಕೆಗೆ 350 ರೂಪಾಯಿ ದರವನ್ನು ನಿಗದಿ ಮಾಡಿದೆ. ಇಂದಿನಿಂದ ಈ ವರ್ಷದ ಅಡಿಕೆ ಮಾರುಕಟ್ಟೆ ಪ್ರವೇಶವಾಗಲಿದ್ದು, ಕಳೆದ ವರ್ಷದ ಅಡಿಕೆಯು ಹಳೆ ಅಡಿಕೆಯಾಗಿ ಚೋಲ್‌ ಅಡಿಕೆಗೆ 490 ರೂಪಾಯಿ ಮತ್ತು  ಡಬಲ್‌ ಚೋಲ್‌ ಅಡಿಕೆಗೆ 530 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಮಾರುಕಟ್ಟೆ 350 ರಿಂದ 355 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ಮಾಹಿತಿ ಇದೆ. ಚೋಲ್‌ ಅಡಿಕೆ 495-500 ರೂಪಾಯಿ ಹಾಗೂ ಡಬಲ್‌ ಚೋಲ್‌ ಅಡಿಕೆ 530-535 ರೂಪಾಯಿವರೆಗೂ ಖರೀದಿ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಈ ಬಾರಿ ಅಡಿಕೆಯ ಫಸಲು ಶೇ.70 ರಷ್ಟು ಕೊಳೆರೋಗ ಹಾಗೂ ಇಳುವರಿ ಕೊರತೆ, ಎಲೆಚುಕ್ಕಿ ರೋಗದಿಂದ ಅಡಿಕೆ ಇಳುವರಿ ಮೇಲೆ ಹೊಡೆತ, ಹವಾಮಾನ ವೈಪರೀತ್ಯದ ಕಾರಣದಿಂದ ಎಳೆ ಅಡಿಕೆ ಬಿದ್ದಿರುವುದು ಸೇರಿದಂತೆ ವಿವಿಧ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಾಗಿದ್ದರೂ ಆರಂಭದ ಮಾರುಕಟ್ಟೆಯಾಗಿ 350 ರೂಪಾಯಿಗೆ ಅಡಿಕೆ ಮಾರುಕಟ್ಟೆ ಬಂದಿದೆ. ಆದರೆ ಈ ಬಾರಿ ಆರಂಭದ ಧಾರಣೆಯೇ ಕಡಿಮೆ ನಿಗದಿಯಾಗಿದೆ. 2024 ರಲ್ಲಿ 340 ರೂಪಾಯಿ ದರ ನಿಗದಿಯಾಗಿದ್ದರೆ  2023 ರಲ್ಲಿ 365 ರೂಪಾಯಿ ನಿಗದಿಯಾಗಿತ್ತು, 2021 ರಲ್ಲಿ  425 ರೂಪಾಯಿ ನಿಗದಿಯಾಗಿತ್ತು. ಈ ಬಾರಿ ಕಳೆದ ವರ್ಷದ ದರಕ್ಕಿಂತ 10 ರೂಪಾಯಿ ಹೆಚ್ಚಾಗಿ ನಿಗದಿಯಾಗಿದೆ. ಆದರೆ ಬೆಳೆ ಕಡಿಮೆ, ಬೆಳೆ ನಷ್ಟ ಹಾಗೂ ಅಡಿಕೆ ಬೆಳೆಗಾರರ ಸಂಕಷ್ಟ ಹಿನ್ನೆಲೆಯಲ್ಲಿ ಈ ಬಾರಿ ಕನಿಷ್ಟ 375 ರೂಪಾಯಿ ಆರಂಭದ ದರ ನಿಗದಿಯಾಗಬೇಕಿತ್ತು ಎನ್ನುವುದು ಅಡಿಕೆ ಬೆಳೆಗಾರರ ನಿರೀಕ್ಷೆಯಾಗಿತ್ತು.  ಕಳೆದ ಮೂರು ವರ್ಷದ ಅಡಿಕೆ ಮಾರುಕಟ್ಟೆಯ ಆರಂಭದ ಮಾಹಿತಿ ಹೀಗಿತ್ತು….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

3 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

15 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

16 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

24 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago