Advertisement
MIRROR FOCUS

ಚಾಲಿ ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ 350 ರೂಪಾಯಿ ದರ ನಿಗದಿ

Share

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಇಂದಿನಿಂದ ಹೊಸ ಅಡಿಕೆಗೆ ದರ ನಿಗದಿಯಾಗಿದೆ. ಕ್ಯಾಂಪ್ಕೊ ಹಾಗೂ ಇತರ ಸಹಕಾರಿ ಸಂಸ್ಥೆಗಳು ಹೊಸ ಅಡಿಕೆಗೆ 350 ರೂಪಾಯಿ ದರವನ್ನು ನಿಗದಿ ಮಾಡಿದೆ. ಇಂದಿನಿಂದ ಈ ವರ್ಷದ ಅಡಿಕೆ ಮಾರುಕಟ್ಟೆ ಪ್ರವೇಶವಾಗಲಿದ್ದು, ಕಳೆದ ವರ್ಷದ ಅಡಿಕೆಯು ಹಳೆ ಅಡಿಕೆಯಾಗಿ ಚೋಲ್‌ ಅಡಿಕೆಗೆ 490 ರೂಪಾಯಿ ಮತ್ತು  ಡಬಲ್‌ ಚೋಲ್‌ ಅಡಿಕೆಗೆ 530 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಮಾರುಕಟ್ಟೆ 350 ರಿಂದ 355 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ಮಾಹಿತಿ ಇದೆ. ಚೋಲ್‌ ಅಡಿಕೆ 495-500 ರೂಪಾಯಿ ಹಾಗೂ ಡಬಲ್‌ ಚೋಲ್‌ ಅಡಿಕೆ 530-535 ರೂಪಾಯಿವರೆಗೂ ಖರೀದಿ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಈ ಬಾರಿ ಅಡಿಕೆಯ ಫಸಲು ಶೇ.70 ರಷ್ಟು ಕೊಳೆರೋಗ ಹಾಗೂ ಇಳುವರಿ ಕೊರತೆ, ಎಲೆಚುಕ್ಕಿ ರೋಗದಿಂದ ಅಡಿಕೆ ಇಳುವರಿ ಮೇಲೆ ಹೊಡೆತ, ಹವಾಮಾನ ವೈಪರೀತ್ಯದ ಕಾರಣದಿಂದ ಎಳೆ ಅಡಿಕೆ ಬಿದ್ದಿರುವುದು ಸೇರಿದಂತೆ ವಿವಿಧ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಾಗಿದ್ದರೂ ಆರಂಭದ ಮಾರುಕಟ್ಟೆಯಾಗಿ 350 ರೂಪಾಯಿಗೆ ಅಡಿಕೆ ಮಾರುಕಟ್ಟೆ ಬಂದಿದೆ. ಆದರೆ ಈ ಬಾರಿ ಆರಂಭದ ಧಾರಣೆಯೇ ಕಡಿಮೆ ನಿಗದಿಯಾಗಿದೆ. 2024 ರಲ್ಲಿ 340 ರೂಪಾಯಿ ದರ ನಿಗದಿಯಾಗಿದ್ದರೆ  2023 ರಲ್ಲಿ 365 ರೂಪಾಯಿ ನಿಗದಿಯಾಗಿತ್ತು, 2021 ರಲ್ಲಿ  425 ರೂಪಾಯಿ ನಿಗದಿಯಾಗಿತ್ತು. ಈ ಬಾರಿ ಕಳೆದ ವರ್ಷದ ದರಕ್ಕಿಂತ 10 ರೂಪಾಯಿ ಹೆಚ್ಚಾಗಿ ನಿಗದಿಯಾಗಿದೆ. ಆದರೆ ಬೆಳೆ ಕಡಿಮೆ, ಬೆಳೆ ನಷ್ಟ ಹಾಗೂ ಅಡಿಕೆ ಬೆಳೆಗಾರರ ಸಂಕಷ್ಟ ಹಿನ್ನೆಲೆಯಲ್ಲಿ ಈ ಬಾರಿ ಕನಿಷ್ಟ 375 ರೂಪಾಯಿ ಆರಂಭದ ದರ ನಿಗದಿಯಾಗಬೇಕಿತ್ತು ಎನ್ನುವುದು ಅಡಿಕೆ ಬೆಳೆಗಾರರ ನಿರೀಕ್ಷೆಯಾಗಿತ್ತು.  ಕಳೆದ ಮೂರು ವರ್ಷದ ಅಡಿಕೆ ಮಾರುಕಟ್ಟೆಯ ಆರಂಭದ ಮಾಹಿತಿ ಹೀಗಿತ್ತು….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

8 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

20 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

22 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago