Advertisement
MIRROR FOCUS

ಚಾಲಿ ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ 350 ರೂಪಾಯಿ ದರ ನಿಗದಿ

Share

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಇಂದಿನಿಂದ ಹೊಸ ಅಡಿಕೆಗೆ ದರ ನಿಗದಿಯಾಗಿದೆ. ಕ್ಯಾಂಪ್ಕೊ ಹಾಗೂ ಇತರ ಸಹಕಾರಿ ಸಂಸ್ಥೆಗಳು ಹೊಸ ಅಡಿಕೆಗೆ 350 ರೂಪಾಯಿ ದರವನ್ನು ನಿಗದಿ ಮಾಡಿದೆ. ಇಂದಿನಿಂದ ಈ ವರ್ಷದ ಅಡಿಕೆ ಮಾರುಕಟ್ಟೆ ಪ್ರವೇಶವಾಗಲಿದ್ದು, ಕಳೆದ ವರ್ಷದ ಅಡಿಕೆಯು ಹಳೆ ಅಡಿಕೆಯಾಗಿ ಚೋಲ್‌ ಅಡಿಕೆಗೆ 490 ರೂಪಾಯಿ ಮತ್ತು  ಡಬಲ್‌ ಚೋಲ್‌ ಅಡಿಕೆಗೆ 530 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಮಾರುಕಟ್ಟೆ 350 ರಿಂದ 355 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ಮಾಹಿತಿ ಇದೆ. ಚೋಲ್‌ ಅಡಿಕೆ 495-500 ರೂಪಾಯಿ ಹಾಗೂ ಡಬಲ್‌ ಚೋಲ್‌ ಅಡಿಕೆ 530-535 ರೂಪಾಯಿವರೆಗೂ ಖರೀದಿ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಈ ಬಾರಿ ಅಡಿಕೆಯ ಫಸಲು ಶೇ.70 ರಷ್ಟು ಕೊಳೆರೋಗ ಹಾಗೂ ಇಳುವರಿ ಕೊರತೆ, ಎಲೆಚುಕ್ಕಿ ರೋಗದಿಂದ ಅಡಿಕೆ ಇಳುವರಿ ಮೇಲೆ ಹೊಡೆತ, ಹವಾಮಾನ ವೈಪರೀತ್ಯದ ಕಾರಣದಿಂದ ಎಳೆ ಅಡಿಕೆ ಬಿದ್ದಿರುವುದು ಸೇರಿದಂತೆ ವಿವಿಧ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಾಗಿದ್ದರೂ ಆರಂಭದ ಮಾರುಕಟ್ಟೆಯಾಗಿ 350 ರೂಪಾಯಿಗೆ ಅಡಿಕೆ ಮಾರುಕಟ್ಟೆ ಬಂದಿದೆ. ಆದರೆ ಈ ಬಾರಿ ಆರಂಭದ ಧಾರಣೆಯೇ ಕಡಿಮೆ ನಿಗದಿಯಾಗಿದೆ. 2024 ರಲ್ಲಿ 340 ರೂಪಾಯಿ ದರ ನಿಗದಿಯಾಗಿದ್ದರೆ  2023 ರಲ್ಲಿ 365 ರೂಪಾಯಿ ನಿಗದಿಯಾಗಿತ್ತು, 2021 ರಲ್ಲಿ  425 ರೂಪಾಯಿ ನಿಗದಿಯಾಗಿತ್ತು. ಈ ಬಾರಿ ಕಳೆದ ವರ್ಷದ ದರಕ್ಕಿಂತ 10 ರೂಪಾಯಿ ಹೆಚ್ಚಾಗಿ ನಿಗದಿಯಾಗಿದೆ. ಆದರೆ ಬೆಳೆ ಕಡಿಮೆ, ಬೆಳೆ ನಷ್ಟ ಹಾಗೂ ಅಡಿಕೆ ಬೆಳೆಗಾರರ ಸಂಕಷ್ಟ ಹಿನ್ನೆಲೆಯಲ್ಲಿ ಈ ಬಾರಿ ಕನಿಷ್ಟ 375 ರೂಪಾಯಿ ಆರಂಭದ ದರ ನಿಗದಿಯಾಗಬೇಕಿತ್ತು ಎನ್ನುವುದು ಅಡಿಕೆ ಬೆಳೆಗಾರರ ನಿರೀಕ್ಷೆಯಾಗಿತ್ತು.  ಕಳೆದ ಮೂರು ವರ್ಷದ ಅಡಿಕೆ ಮಾರುಕಟ್ಟೆಯ ಆರಂಭದ ಮಾಹಿತಿ ಹೀಗಿತ್ತು….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

10 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

10 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

16 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago