Advertisement
MIRROR FOCUS

ಚಾಲಿ ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ 350 ರೂಪಾಯಿ ದರ ನಿಗದಿ

Share

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಇಂದಿನಿಂದ ಹೊಸ ಅಡಿಕೆಗೆ ದರ ನಿಗದಿಯಾಗಿದೆ. ಕ್ಯಾಂಪ್ಕೊ ಹಾಗೂ ಇತರ ಸಹಕಾರಿ ಸಂಸ್ಥೆಗಳು ಹೊಸ ಅಡಿಕೆಗೆ 350 ರೂಪಾಯಿ ದರವನ್ನು ನಿಗದಿ ಮಾಡಿದೆ. ಇಂದಿನಿಂದ ಈ ವರ್ಷದ ಅಡಿಕೆ ಮಾರುಕಟ್ಟೆ ಪ್ರವೇಶವಾಗಲಿದ್ದು, ಕಳೆದ ವರ್ಷದ ಅಡಿಕೆಯು ಹಳೆ ಅಡಿಕೆಯಾಗಿ ಚೋಲ್‌ ಅಡಿಕೆಗೆ 490 ರೂಪಾಯಿ ಮತ್ತು  ಡಬಲ್‌ ಚೋಲ್‌ ಅಡಿಕೆಗೆ 530 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಮಾರುಕಟ್ಟೆ 350 ರಿಂದ 355 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ಮಾಹಿತಿ ಇದೆ. ಚೋಲ್‌ ಅಡಿಕೆ 495-500 ರೂಪಾಯಿ ಹಾಗೂ ಡಬಲ್‌ ಚೋಲ್‌ ಅಡಿಕೆ 530-535 ರೂಪಾಯಿವರೆಗೂ ಖರೀದಿ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement

ಈ ಬಾರಿ ಅಡಿಕೆಯ ಫಸಲು ಶೇ.70 ರಷ್ಟು ಕೊಳೆರೋಗ ಹಾಗೂ ಇಳುವರಿ ಕೊರತೆ, ಎಲೆಚುಕ್ಕಿ ರೋಗದಿಂದ ಅಡಿಕೆ ಇಳುವರಿ ಮೇಲೆ ಹೊಡೆತ, ಹವಾಮಾನ ವೈಪರೀತ್ಯದ ಕಾರಣದಿಂದ ಎಳೆ ಅಡಿಕೆ ಬಿದ್ದಿರುವುದು ಸೇರಿದಂತೆ ವಿವಿಧ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಾಗಿದ್ದರೂ ಆರಂಭದ ಮಾರುಕಟ್ಟೆಯಾಗಿ 350 ರೂಪಾಯಿಗೆ ಅಡಿಕೆ ಮಾರುಕಟ್ಟೆ ಬಂದಿದೆ. ಆದರೆ ಈ ಬಾರಿ ಆರಂಭದ ಧಾರಣೆಯೇ ಕಡಿಮೆ ನಿಗದಿಯಾಗಿದೆ. 2024 ರಲ್ಲಿ 340 ರೂಪಾಯಿ ದರ ನಿಗದಿಯಾಗಿದ್ದರೆ  2023 ರಲ್ಲಿ 365 ರೂಪಾಯಿ ನಿಗದಿಯಾಗಿತ್ತು, 2021 ರಲ್ಲಿ  425 ರೂಪಾಯಿ ನಿಗದಿಯಾಗಿತ್ತು. ಈ ಬಾರಿ ಕಳೆದ ವರ್ಷದ ದರಕ್ಕಿಂತ 10 ರೂಪಾಯಿ ಹೆಚ್ಚಾಗಿ ನಿಗದಿಯಾಗಿದೆ. ಆದರೆ ಬೆಳೆ ಕಡಿಮೆ, ಬೆಳೆ ನಷ್ಟ ಹಾಗೂ ಅಡಿಕೆ ಬೆಳೆಗಾರರ ಸಂಕಷ್ಟ ಹಿನ್ನೆಲೆಯಲ್ಲಿ ಈ ಬಾರಿ ಕನಿಷ್ಟ 375 ರೂಪಾಯಿ ಆರಂಭದ ದರ ನಿಗದಿಯಾಗಬೇಕಿತ್ತು ಎನ್ನುವುದು ಅಡಿಕೆ ಬೆಳೆಗಾರರ ನಿರೀಕ್ಷೆಯಾಗಿತ್ತು.  ಕಳೆದ ಮೂರು ವರ್ಷದ ಅಡಿಕೆ ಮಾರುಕಟ್ಟೆಯ ಆರಂಭದ ಮಾಹಿತಿ ಹೀಗಿತ್ತು….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

2 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

2 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

2 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

3 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago