ಸುದ್ದಿಗಳು

ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ | ಧರ್ಮಸ್ಥಳದಿಂದ ಹೊಸ ಯೋಜನೆಗಳು ಪ್ರಕಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಧರ್ಮಸ್ಥಳದಿಂದ ಹೊಸ ಯೋಜನೆಗಳನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು.

Advertisement
Advertisement

ಗ್ರಾಮೀಣ ಪ್ರದೇಶಗಳಲ್ಲಿ ಆಪತ್ತು ಸಂಭವಿಸಿದಾಗ ತುರ್ತು ನೆರವು ಮತ್ತುರಕ್ಷಣೆಗಾಗಿ ಮೂರು ಸಾವಿರ “ಶೌರ್ಯ” ಸ್ವಯಂ ಸೇವಕರ ತಂಡಗಳನ್ನು ರಚಿಸಲಾಗಿದೆ. ಸದ್ಯದಲ್ಲಿಯೇರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಉದ್ಘಾಟಿಸಲಿದ್ದಾರೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

ಇದರ ಜೊತೆಗೆ ರಾಜ್ಯಸಭಾ ಸದಸ್ಯನ ನೆಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಲು ಉದ್ದೇಶಿಸಿದ್ದು ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ಸರ್ಕಾರದ ಸೇವೆಗಳನ್ನು ಜನರಿಗೆತಲುಪಿಸಲು ಈಗಾಗಲೇ ಆರು ಸಾವಿರದ ಐದುನೂರು ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಿದ್ದು ಈ ವರ್ಷ ಇನ್ನೂಒಂದು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಕಳೆದ ವರ್ಷ ಆರು ಕೋಟಿ ರೂ. ವೆಚ್ಚದಲ್ಲಿ ಮೂರು ಆಸ್ಪತ್ರೆಗಳಿಗೆ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಿದ್ದು ಈ ವರ್ಷಇನ್ನೂ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಲಾಗುವುದು.

ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಮೂಲಕ ಐವತ್ತು ಲಕ್ಷ ಕುಟುಂಬಗಳ ಫಲಾನುಭವಿಗಳು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಮಹಿಳಾ ಸಬಲೀಕರಣಕ್ಕೆಒತ್ತು ನೀಡಲಾಗುತ್ತಿದೆ.  365 ಸರ್ಕಾರಿ ಶಾಲೆಗಳಿಗೆ 2700 ಬೆಂಚು-ಡೆಸ್ಕುಗಳನ್ನು ವಿತರಿಸಲಾಗುವುದು. ಈ ವರ್ಷ 100 ಕೆರೆಗಳ ಹೂಳೆತ್ತಿ ಪುನಶ್ಚೇತನಕ್ಕೆಯೋಜನೆರೂಪಿಸಲಾಗಿದೆ. 40 ಶುದ್ಧಗಂಗಾ ಘಟಕಗಳ ಮೂಲಕ ಶುದ್ಧಕುಡಿಯುವ ನೀರು ಪೂರೈಸಲಾಗುವುದು.

ಉಜಿರೆಯಲ್ಲಿ ಘನ ತ್ಯಾಜ್ಯ ನಿರ್ವಹಣಾಘಟಕಕ್ಕೆ 47 ಲಕ್ಷರೂ. ನೆರವು ನೀಡಲಾಗುವುದು. ಅನಾಥ ಹಿರಿಯ ನಾಗರಿಕರ ಪಾಲನೆ ಮತ್ತು ಪೋಷಣೆಗಾಗಿಐದುಕೋಟಿರೂ. ವೆಚ್ಚದಲ್ಲಿ 500 ಮನೆಗಳನ್ನು ನಿರ್ಮಿಸಲಾಗುವುದುಎಂದು ಹೆಗ್ಗಡೆಯವರು ಪ್ರಕಟಿಸಿದರು.  ಈ ವರ್ಷ ಈಗಾಗಲೇ 7312 ದೇವಸ್ಥಾನಗಳಿಗೆ 89 ಕೋಟಿರೂ. ನೆರವು ನೀಡಲಾಗಿದೆ. ಧಾರವಾಡದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ  ಕ್ಯಾನ್ಸರ್ ಚಿಕಿತ್ಸಾಕೇಂದ್ರ ಸದ್ಯದಲ್ಲಿಯೇ ಪ್ರಾರಂಭಗೊಳ್ಳಲಿದೆ. ಧರ್ಮಸ್ಥಳದಲ್ಲಿ ಭಕ್ತಾದಿಗಳ ಸೇವೆ ಮತ್ತು ಅನುಕೂಲಕ್ಕಾಗ ಕ್ಯೂ ಕಾಂಪ್ಲೆಕ್ಸ್ ಕಾಮಗಾರಿ ಪ್ರಗತಿಯಲ್ಲಿದ್ದುಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದು ಡಾ.ಹೆಗ್ಗಡೆ ಹೊಸ ಯೋಜನೆಗಳ ಬಗ್ಗೆ ಹೇಳಿದರು.
Advertisement

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿಅಭಿನಂದನಾ ಭಾಷಣ ಮಾಡಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ , ಸತ್ಯ, ಧರ್ಮ, ನ್ಯಾಯ – ನೀತಿಯ ನೆಲೆಯಲ್ಲಿ ಸನಾತನ ಸಂಸ್ಕøತಿಯ ಸಂರಕ್ಷಣೆಯೊಂದಿಗೆ ಮನಪರಿವರ್ತನೆ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸೇವಾ ಕಾರ್ಯಗಳು ಹಾಗೂ ಕ್ರಾಂತಿಕಾರಿ ಪರಿವರ್ತನೆ ಸಾರ್ವಕಾಲಿಕ ಮೌಲ್ಯ ಹೊಂದಿದ್ದುಆದರ್ಶ ಹಾಗೂ ಅನುಕರಣೀಯವಾಗಿದೆ ಎಂದರು.

ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಪ್ರೊ.ಎಸ್. ಪ್ರಭಾಕರ್, ಡಿ. ರಾಜೇಂದ್ರಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ ಶಾಸಕ ಕೆ. ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮತ್ತುಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಸಿ.ಒ.ಒ. ಅನಿಲ್ ಸ್ವಾಗತಿಸಿದರು. ಡಿ.ಎಂ.ಸಿ.ಯ ಪ್ರಭಾಕರ್ ವಂದಿಸಿದರು. ಉಪನ್ಯಾಸ ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

2 hours ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

3 hours ago

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

12 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

14 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

17 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

18 hours ago