Advertisement
ಸುದ್ದಿಗಳು

ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ | ಧರ್ಮಸ್ಥಳದಿಂದ ಹೊಸ ಯೋಜನೆಗಳು ಪ್ರಕಟ

Share

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಧರ್ಮಸ್ಥಳದಿಂದ ಹೊಸ ಯೋಜನೆಗಳನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಆಪತ್ತು ಸಂಭವಿಸಿದಾಗ ತುರ್ತು ನೆರವು ಮತ್ತುರಕ್ಷಣೆಗಾಗಿ ಮೂರು ಸಾವಿರ “ಶೌರ್ಯ” ಸ್ವಯಂ ಸೇವಕರ ತಂಡಗಳನ್ನು ರಚಿಸಲಾಗಿದೆ. ಸದ್ಯದಲ್ಲಿಯೇರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಉದ್ಘಾಟಿಸಲಿದ್ದಾರೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

ಇದರ ಜೊತೆಗೆ ರಾಜ್ಯಸಭಾ ಸದಸ್ಯನ ನೆಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಲು ಉದ್ದೇಶಿಸಿದ್ದು ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ಸರ್ಕಾರದ ಸೇವೆಗಳನ್ನು ಜನರಿಗೆತಲುಪಿಸಲು ಈಗಾಗಲೇ ಆರು ಸಾವಿರದ ಐದುನೂರು ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಿದ್ದು ಈ ವರ್ಷ ಇನ್ನೂಒಂದು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಕಳೆದ ವರ್ಷ ಆರು ಕೋಟಿ ರೂ. ವೆಚ್ಚದಲ್ಲಿ ಮೂರು ಆಸ್ಪತ್ರೆಗಳಿಗೆ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಿದ್ದು ಈ ವರ್ಷಇನ್ನೂ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಲಾಗುವುದು.

ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಮೂಲಕ ಐವತ್ತು ಲಕ್ಷ ಕುಟುಂಬಗಳ ಫಲಾನುಭವಿಗಳು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಮಹಿಳಾ ಸಬಲೀಕರಣಕ್ಕೆಒತ್ತು ನೀಡಲಾಗುತ್ತಿದೆ.  365 ಸರ್ಕಾರಿ ಶಾಲೆಗಳಿಗೆ 2700 ಬೆಂಚು-ಡೆಸ್ಕುಗಳನ್ನು ವಿತರಿಸಲಾಗುವುದು. ಈ ವರ್ಷ 100 ಕೆರೆಗಳ ಹೂಳೆತ್ತಿ ಪುನಶ್ಚೇತನಕ್ಕೆಯೋಜನೆರೂಪಿಸಲಾಗಿದೆ. 40 ಶುದ್ಧಗಂಗಾ ಘಟಕಗಳ ಮೂಲಕ ಶುದ್ಧಕುಡಿಯುವ ನೀರು ಪೂರೈಸಲಾಗುವುದು.

ಉಜಿರೆಯಲ್ಲಿ ಘನ ತ್ಯಾಜ್ಯ ನಿರ್ವಹಣಾಘಟಕಕ್ಕೆ 47 ಲಕ್ಷರೂ. ನೆರವು ನೀಡಲಾಗುವುದು. ಅನಾಥ ಹಿರಿಯ ನಾಗರಿಕರ ಪಾಲನೆ ಮತ್ತು ಪೋಷಣೆಗಾಗಿಐದುಕೋಟಿರೂ. ವೆಚ್ಚದಲ್ಲಿ 500 ಮನೆಗಳನ್ನು ನಿರ್ಮಿಸಲಾಗುವುದುಎಂದು ಹೆಗ್ಗಡೆಯವರು ಪ್ರಕಟಿಸಿದರು.  ಈ ವರ್ಷ ಈಗಾಗಲೇ 7312 ದೇವಸ್ಥಾನಗಳಿಗೆ 89 ಕೋಟಿರೂ. ನೆರವು ನೀಡಲಾಗಿದೆ. ಧಾರವಾಡದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ  ಕ್ಯಾನ್ಸರ್ ಚಿಕಿತ್ಸಾಕೇಂದ್ರ ಸದ್ಯದಲ್ಲಿಯೇ ಪ್ರಾರಂಭಗೊಳ್ಳಲಿದೆ. ಧರ್ಮಸ್ಥಳದಲ್ಲಿ ಭಕ್ತಾದಿಗಳ ಸೇವೆ ಮತ್ತು ಅನುಕೂಲಕ್ಕಾಗ ಕ್ಯೂ ಕಾಂಪ್ಲೆಕ್ಸ್ ಕಾಮಗಾರಿ ಪ್ರಗತಿಯಲ್ಲಿದ್ದುಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದು ಡಾ.ಹೆಗ್ಗಡೆ ಹೊಸ ಯೋಜನೆಗಳ ಬಗ್ಗೆ ಹೇಳಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿಅಭಿನಂದನಾ ಭಾಷಣ ಮಾಡಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ , ಸತ್ಯ, ಧರ್ಮ, ನ್ಯಾಯ – ನೀತಿಯ ನೆಲೆಯಲ್ಲಿ ಸನಾತನ ಸಂಸ್ಕøತಿಯ ಸಂರಕ್ಷಣೆಯೊಂದಿಗೆ ಮನಪರಿವರ್ತನೆ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸೇವಾ ಕಾರ್ಯಗಳು ಹಾಗೂ ಕ್ರಾಂತಿಕಾರಿ ಪರಿವರ್ತನೆ ಸಾರ್ವಕಾಲಿಕ ಮೌಲ್ಯ ಹೊಂದಿದ್ದುಆದರ್ಶ ಹಾಗೂ ಅನುಕರಣೀಯವಾಗಿದೆ ಎಂದರು.

ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಪ್ರೊ.ಎಸ್. ಪ್ರಭಾಕರ್, ಡಿ. ರಾಜೇಂದ್ರಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ ಶಾಸಕ ಕೆ. ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮತ್ತುಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಸಿ.ಒ.ಒ. ಅನಿಲ್ ಸ್ವಾಗತಿಸಿದರು. ಡಿ.ಎಂ.ಸಿ.ಯ ಪ್ರಭಾಕರ್ ವಂದಿಸಿದರು. ಉಪನ್ಯಾಸ ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

4 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

12 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

14 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

19 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

21 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago