ಪಶ್ಚಿಮ ಘಟ್ಟದ ಉಷ್ಣ ವಲಯ ಮಳೆ ಕಾಡುಗಳಲ್ಲಿ, ಸೊನೆರೆಲಾ ಎಂಬ ವರ್ಗದ ಮೂರು ಹೊಸ ಸಸ್ಯ ಪ್ರಭೇದಗಳನ್ನು ದಾವಣಗೆರೆ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ತಂಡ ಪತ್ತೆ ಹಚ್ಚಿದೆ. ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಮತ್ತು ಸಂಶೋಧನಾ ವಿದ್ಯಾರ್ಥಿ ಪ್ರಶಾಂತ್ ಕಾರದಕಟ್ಟೆ ಅವರ ತಂಡ ಚಿಕ್ಕಮಗಳೂರು ಜಿಲ್ಲೆಯ ಬಾಬ ಬುಡನ್ ಗಿರಿ, ಕೊಡಗು ಜಿಲ್ಲೆಯ, ಕಡಮಕ್ಕಲ್ ನ ಮಲ್ಲಳ್ಳಿ ಜಲಪಾತ, ಶಿವಮೊಗ್ಗದ ಕವಲೇದುರ್ಗ ಹಾಗೂ ಚಾರ್ಮಾಡಿ ಘಾಟ್ ಪ್ರದೇಶಗಳಲ್ಲಿ ಈ ವಿಶೇಷ ಸಸ್ಯ ಪ್ರಬೇದಗಳನ್ನು ಪತ್ತೆ ಹಚ್ಚಿದ್ದಾರೆ.
ಅಪರೂಪದ ಸಸ್ಯ ಪ್ರಭೇದಗಳು ಪಶ್ಚಿಮಘಟ್ಟದಲ್ಲಿ ಪತ್ತೆಯಾಗಿದ್ದು, ಅವು, ಜೀವ ವೈವಿಧ್ಯತೆಗೆ ಸಾಕ್ಷಿಯಾಗಿದೆ. ಸೊನೆರೆಲಾ ಜಾತಿಯ ಮೂರು ಪ್ರಭೇದಗಳನ್ನು ಪತ್ತೆ ಹಚ್ಚಲಾಗಿದ್ದು, ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲೂ ಈ ಕುರಿತಾಗಿ ಮಾಹಿತಿ ಪ್ರಕಟಿಸಲಾಗಿದೆ ಎಂದು ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಹೇಳಿದ್ದಾರೆ.
ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಸಾಕಷ್ಟು ಸಂಶೋಧನೆ ನಡೆಸುತ್ತಿದ್ದು, ಪ್ರಸ್ತುತ ಪತ್ತೆಯಾಗಿರುವ ಹೊಸ ಸಸ್ಯ ಪ್ರಭೇದಗಳು, ವಾಯುಮಾಲಿನ್ಯ ತಡೆಗಟ್ಟುವಲ್ಲಿ ಸಹಕಾರಿಯಾಗಿವೆ ಎಂದು ಹೇಳುತ್ತಾರೆ ವಿದ್ಯಾರ್ಥಿ ಪ್ರಶಾಂತ್ ಕಾರದಕಟ್ಟೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…