Advertisement
MIRROR FOCUS

ಪಶ್ಚಿಮಘಟ್ಟಗಳಲ್ಲಿ ಹೊಸ ಸಸ್ಯ ಪ್ರಭೇದಗಳು ಪತ್ತೆ | ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳು

Share

ಪಶ್ಚಿಮ ಘಟ್ಟದ ಉಷ್ಣ ವಲಯ ಮಳೆ ಕಾಡುಗಳಲ್ಲಿ,  ಸೊನೆರೆಲಾ ಎಂಬ ವರ್ಗದ   ಮೂರು  ಹೊಸ ಸಸ್ಯ ಪ್ರಭೇದಗಳನ್ನು  ದಾವಣಗೆರೆ  ವಿಶ್ವವಿದ್ಯಾಲಯದ  ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ತಂಡ  ಪತ್ತೆ ಹಚ್ಚಿದೆ.  ಸಹಾಯಕ ಪ್ರಾಧ್ಯಾಪಕ   ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಮತ್ತು ಸಂಶೋಧನಾ ವಿದ್ಯಾರ್ಥಿ  ಪ್ರಶಾಂತ್ ಕಾರದಕಟ್ಟೆ ಅವರ  ತಂಡ  ಚಿಕ್ಕಮಗಳೂರು ಜಿಲ್ಲೆಯ ಬಾಬ ಬುಡನ್ ಗಿರಿ, ಕೊಡಗು ಜಿಲ್ಲೆಯ,  ಕಡಮಕ್ಕಲ್ ನ  ಮಲ್ಲಳ್ಳಿ ಜಲಪಾತ, ಶಿವಮೊಗ್ಗದ ಕವಲೇದುರ್ಗ  ಹಾಗೂ ಚಾರ್ಮಾಡಿ  ಘಾಟ್ ಪ್ರದೇಶಗಳಲ್ಲಿ ಈ ವಿಶೇಷ ಸಸ್ಯ ಪ್ರಬೇದಗಳನ್ನು ಪತ್ತೆ ಹಚ್ಚಿದ್ದಾರೆ.

ಅಪರೂಪದ ಸಸ್ಯ ಪ್ರಭೇದಗಳು ಪಶ್ಚಿಮಘಟ್ಟದಲ್ಲಿ ಪತ್ತೆಯಾಗಿದ್ದು,  ಅವು,  ಜೀವ ವೈವಿಧ್ಯತೆಗೆ  ಸಾಕ್ಷಿಯಾಗಿದೆ. ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳನ್ನು ಪತ್ತೆ ಹಚ್ಚಲಾಗಿದ್ದು, ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲೂ ಈ ಕುರಿತಾಗಿ ಮಾಹಿತಿ  ಪ್ರಕಟಿಸಲಾಗಿದೆ  ಎಂದು ಡಾ. ಸಿದ್ದಪ್ಪ ಬಿ. ಕಕ್ಕಳಮೇಲಿ ಹೇಳಿದ್ದಾರೆ.

ಸಸ್ಯಶಾಸ್ತ್ರ  ವಿಭಾಗದ ವತಿಯಿಂದ  ಸಾಕಷ್ಟು  ಸಂಶೋಧನೆ ನಡೆಸುತ್ತಿದ್ದು, ಪ್ರಸ್ತುತ ಪತ್ತೆಯಾಗಿರುವ  ಹೊಸ  ಸಸ್ಯ ಪ್ರಭೇದಗಳು,  ವಾಯುಮಾಲಿನ್ಯ  ತಡೆಗಟ್ಟುವಲ್ಲಿ ಸಹಕಾರಿಯಾಗಿವೆ ಎಂದು ಹೇಳುತ್ತಾರೆ ವಿದ್ಯಾರ್ಥಿ  ಪ್ರಶಾಂತ್ ಕಾರದಕಟ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

24 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago