ರೇಷನ್ ಕಾರ್ಡ್ದಾರರಿಗೆ ಸರ್ಕಾರದಿಂದ ಹೊಸ ನಿಯಮ ಜಾರಿ – ನ್ಯಾಯಬೆಲೆ ಅಂಗಡಿಯಲ್ಲಿ ಇನ್ನು ಮುಂದೆ ಎಲೆಕ್ಟ್ರಾನಿಕ್ ಮಾಪಕ

March 20, 2023
7:00 PM

ರಾಜ್ಯದ ಎಲ್ಲಾ ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಕೇಂದ್ರ ಸರ್ಕಾರ ಭರ್ಜರಿ ಸುದ್ದಿ ನೀಡಿದೆ. ಅಲ್ಲದೇ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ರೇಷನ್‌ ಕಾರ್ಡ್‌ ಹೊಂದಿರುವವರು ಪಡದುಕೊಳ್ಳಬಹುದು.

ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ರೇಷನ್ ಕಾರ್ಡ್‌ ಹೊಂದಿರುವ ಎಲ್ಲಾ ಪಡಿತರದಾರರಿಗೆ ಈಗ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು‌ ತಂದಿದೆ. ಕೇಂದ್ರ ಸರ್ಕಾರದ ಒನ್ನೇಷನ್ಒನ್ರೇಷನ್ ಕಾರ್ಡ್ಯೋಜನೆ‌ ಹಾಗೂ ಪ್ರಧಾನ ಮಂತ್ರಿ ಗರೀಬ್ಕಲ್ಯಾಣ್ಅನ್ನ ಯೋಜನೆ ಅಡಿಯಲ್ಲಿ ಸೇರಿದಂತೆ ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಇದೀಗ ರಾಜ್ಯದ ಎಲ್ಲಾ ಜನತೆಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.

ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ವಿತರಣೆ ಮಾಡುತ್ತಿರುವ ರೇಷನ್‌ ನಲ್ಲಿ ಅಥವಾ ಆಹಾರ ಧಾನ್ಯಗಳಲ್ಲಿ ಇದೀಗ ಎಲ್ಲಾ ಸಾರ್ವಜನಿಕರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ. ಹಲವರು ತೂಕ ಮಾಡುವ ವೇಳೆಯಲ್ಲಿ ಹೆಚ್ಚು ಕಡಿಮೆ ಮಾಡುತ್ತಿದ್ದು, ಎಲ್ಲಾ ಸಾರ್ವಜನಿಕರು ಮೋಸದ ವಂಚನೆಯಲ್ಲಿ ಸಿಲುಕುತ್ತಿದ್ದಾರೆ. ಹೀಗಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ NFSA ಅಡಿಯಲ್ಲಿ ಪ್ರತಿ ಎಲ್ಲಾ ದೇಶದ ಹಾಗೂ ನಮ್ಮ ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಇದೀಗ ಕೇಂದ್ರ ಸರ್ಕಾರದಿಂದ ಎಲೆಕ್ಟ್ರಾನಿಕ್‌ ಮಾಪಕವಾದ EPOS ಸಾಧನವನ್ನು ಲಿಂಕ್‌ ಮಾಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ಈ ನಿಯಮ ಜಾರಿಗೆ ಬಂದ ನಂತರ ಎಲ್ಲಾ ಪಡಿತರ ವಿತರಕರು ರೇಷನ್‌ ಆಹಾರ ಧಾನ್ಯ ನ್ಯಾಯಬೆಲೆಯಲ್ಲಿ ವಿತರಣೆ ಮಾಡುತ್ತಿರುವವರು ಈ ಎಲೆಕ್ಟ್ರಾನಿಕ್‌ ಮಾಪಕವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಖುದ್ದಾಗಿ ಅಳವಡಿಸಿಕೊಡಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರಿಗೂ ಕೂಡ ಎಷ್ಟು ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದಾರೆ, ಹಾಗು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕ್ಕು ಕೂಡ ಸಾವರ್ಜನಿಕರಿಗೆ ಎಷ್ಟು ಆಹಾರ ಧಾನ್ಯವನ್ನು ವಿತರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿಯುತ್ತದೆ. ಇದರಿಂದಾಗಿ ಯಾವುದೇ ತರಹದ ತೂಕದಲ್ಲಿ ಅಡಚಣೆಗಳು ಆಗುವುದಿಲ್ಲ. ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯ ಗಳು ಸಿಗಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror