ರಾಜ್ಯದ ಎಲ್ಲಾ ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರ ಭರ್ಜರಿ ಸುದ್ದಿ ನೀಡಿದೆ. ಅಲ್ಲದೇ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ರೇಷನ್ ಕಾರ್ಡ್ ಹೊಂದಿರುವವರು ಪಡದುಕೊಳ್ಳಬಹುದು.
ಬಿಪಿಎಲ್, ಎಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಪಡಿತರದಾರರಿಗೆ ಈಗ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು ತಂದಿದೆ. ಕೇಂದ್ರ ಸರ್ಕಾರದ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಸೇರಿದಂತೆ ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಇದೀಗ ರಾಜ್ಯದ ಎಲ್ಲಾ ಜನತೆಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.
ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ವಿತರಣೆ ಮಾಡುತ್ತಿರುವ ರೇಷನ್ ನಲ್ಲಿ ಅಥವಾ ಆಹಾರ ಧಾನ್ಯಗಳಲ್ಲಿ ಇದೀಗ ಎಲ್ಲಾ ಸಾರ್ವಜನಿಕರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ. ಹಲವರು ತೂಕ ಮಾಡುವ ವೇಳೆಯಲ್ಲಿ ಹೆಚ್ಚು ಕಡಿಮೆ ಮಾಡುತ್ತಿದ್ದು, ಎಲ್ಲಾ ಸಾರ್ವಜನಿಕರು ಮೋಸದ ವಂಚನೆಯಲ್ಲಿ ಸಿಲುಕುತ್ತಿದ್ದಾರೆ. ಹೀಗಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ NFSA ಅಡಿಯಲ್ಲಿ ಪ್ರತಿ ಎಲ್ಲಾ ದೇಶದ ಹಾಗೂ ನಮ್ಮ ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಇದೀಗ ಕೇಂದ್ರ ಸರ್ಕಾರದಿಂದ ಎಲೆಕ್ಟ್ರಾನಿಕ್ ಮಾಪಕವಾದ EPOS ಸಾಧನವನ್ನು ಲಿಂಕ್ ಮಾಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.
ಈ ನಿಯಮ ಜಾರಿಗೆ ಬಂದ ನಂತರ ಎಲ್ಲಾ ಪಡಿತರ ವಿತರಕರು ರೇಷನ್ ಆಹಾರ ಧಾನ್ಯ ನ್ಯಾಯಬೆಲೆಯಲ್ಲಿ ವಿತರಣೆ ಮಾಡುತ್ತಿರುವವರು ಈ ಎಲೆಕ್ಟ್ರಾನಿಕ್ ಮಾಪಕವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಖುದ್ದಾಗಿ ಅಳವಡಿಸಿಕೊಡಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರಿಗೂ ಕೂಡ ಎಷ್ಟು ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದಾರೆ, ಹಾಗು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕ್ಕು ಕೂಡ ಸಾವರ್ಜನಿಕರಿಗೆ ಎಷ್ಟು ಆಹಾರ ಧಾನ್ಯವನ್ನು ವಿತರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿಯುತ್ತದೆ. ಇದರಿಂದಾಗಿ ಯಾವುದೇ ತರಹದ ತೂಕದಲ್ಲಿ ಅಡಚಣೆಗಳು ಆಗುವುದಿಲ್ಲ. ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯ ಗಳು ಸಿಗಲಿವೆ.
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2025' ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ…
ಕಳೆದ 5 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಅಡಿಕೆ ಕೃಷಿ ಶೇ. 50 ರಷ್ಟು ಹೆಚ್ಚಾಗಿದೆ.ಇದುವರೆಗೂ…
ಸರ್ಕಾರಿ ಆಯುರ್ವೇದ ಕಾಲೇಜು ಸ್ಥಾಪನೆಯಾದರೆ ಅಡಿಕೆಯ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗಬಹುದು. ಅಲ್ಲದೆ, ಸಾಂಪ್ರದಾಯಿಕ…
ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ ಕೇಂದ್ರ ಕೃಷಿ ಸಚಿವರಲ್ಲಿ…
ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ…
ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು…