Advertisement
ಸುದ್ದಿಗಳು

ರೇಷನ್ ಕಾರ್ಡ್ದಾರರಿಗೆ ಸರ್ಕಾರದಿಂದ ಹೊಸ ನಿಯಮ ಜಾರಿ – ನ್ಯಾಯಬೆಲೆ ಅಂಗಡಿಯಲ್ಲಿ ಇನ್ನು ಮುಂದೆ ಎಲೆಕ್ಟ್ರಾನಿಕ್ ಮಾಪಕ

Share

ರಾಜ್ಯದ ಎಲ್ಲಾ ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಕೇಂದ್ರ ಸರ್ಕಾರ ಭರ್ಜರಿ ಸುದ್ದಿ ನೀಡಿದೆ. ಅಲ್ಲದೇ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ರೇಷನ್‌ ಕಾರ್ಡ್‌ ಹೊಂದಿರುವವರು ಪಡದುಕೊಳ್ಳಬಹುದು.

ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ರೇಷನ್ ಕಾರ್ಡ್‌ ಹೊಂದಿರುವ ಎಲ್ಲಾ ಪಡಿತರದಾರರಿಗೆ ಈಗ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು‌ ತಂದಿದೆ. ಕೇಂದ್ರ ಸರ್ಕಾರದ ಒನ್ನೇಷನ್ಒನ್ರೇಷನ್ ಕಾರ್ಡ್ಯೋಜನೆ‌ ಹಾಗೂ ಪ್ರಧಾನ ಮಂತ್ರಿ ಗರೀಬ್ಕಲ್ಯಾಣ್ಅನ್ನ ಯೋಜನೆ ಅಡಿಯಲ್ಲಿ ಸೇರಿದಂತೆ ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಇದೀಗ ರಾಜ್ಯದ ಎಲ್ಲಾ ಜನತೆಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.

ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ವಿತರಣೆ ಮಾಡುತ್ತಿರುವ ರೇಷನ್‌ ನಲ್ಲಿ ಅಥವಾ ಆಹಾರ ಧಾನ್ಯಗಳಲ್ಲಿ ಇದೀಗ ಎಲ್ಲಾ ಸಾರ್ವಜನಿಕರಿಗೆ ಸರಿಯಾದ ಪ್ರಮಾಣದಲ್ಲಿ ಸಿಗುತ್ತಿಲ್ಲ. ಹಲವರು ತೂಕ ಮಾಡುವ ವೇಳೆಯಲ್ಲಿ ಹೆಚ್ಚು ಕಡಿಮೆ ಮಾಡುತ್ತಿದ್ದು, ಎಲ್ಲಾ ಸಾರ್ವಜನಿಕರು ಮೋಸದ ವಂಚನೆಯಲ್ಲಿ ಸಿಲುಕುತ್ತಿದ್ದಾರೆ. ಹೀಗಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ NFSA ಅಡಿಯಲ್ಲಿ ಪ್ರತಿ ಎಲ್ಲಾ ದೇಶದ ಹಾಗೂ ನಮ್ಮ ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಇದೀಗ ಕೇಂದ್ರ ಸರ್ಕಾರದಿಂದ ಎಲೆಕ್ಟ್ರಾನಿಕ್‌ ಮಾಪಕವಾದ EPOS ಸಾಧನವನ್ನು ಲಿಂಕ್‌ ಮಾಡಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ಈ ನಿಯಮ ಜಾರಿಗೆ ಬಂದ ನಂತರ ಎಲ್ಲಾ ಪಡಿತರ ವಿತರಕರು ರೇಷನ್‌ ಆಹಾರ ಧಾನ್ಯ ನ್ಯಾಯಬೆಲೆಯಲ್ಲಿ ವಿತರಣೆ ಮಾಡುತ್ತಿರುವವರು ಈ ಎಲೆಕ್ಟ್ರಾನಿಕ್‌ ಮಾಪಕವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಖುದ್ದಾಗಿ ಅಳವಡಿಸಿಕೊಡಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರಿಗೂ ಕೂಡ ಎಷ್ಟು ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದಾರೆ, ಹಾಗು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕ್ಕು ಕೂಡ ಸಾವರ್ಜನಿಕರಿಗೆ ಎಷ್ಟು ಆಹಾರ ಧಾನ್ಯವನ್ನು ವಿತರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿಯುತ್ತದೆ. ಇದರಿಂದಾಗಿ ಯಾವುದೇ ತರಹದ ತೂಕದಲ್ಲಿ ಅಡಚಣೆಗಳು ಆಗುವುದಿಲ್ಲ. ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯ ಗಳು ಸಿಗಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

2 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

2 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

3 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

5 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

16 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

17 hours ago