ರೈತರ ಸಬಲೀಕರಣ ಮತ್ತು ಕೃಷಿ ಕ್ಷೇತ್ರದ ಸುಧಾರಣೆಗೆ ಕೇಂದ್ರ ಸರ್ಕಾರ ಎರಡು ಪ್ರಮುಖ ಕಾನೂನು ಬದಲಾವಣೆಗಳನ್ನು ಜಾರಿಗೆ ತರಲು ಸಿದ್ಧವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಉತ್ತರಾಖಂಡದ ಮಸೂರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ ಕಾಯ್ದೆ ಈ ಮಹತ್ವದ ಸುಧಾರಣೆಗಳಲ್ಲಿ ಸೇರಿವೆ ಎಂದು ಹೇಳಿದರು.
ಬೀಜ ಹಾಗೂ ಕೀಟನಾಶಕ ಕ್ಷೇತ್ರದಲ್ಲಿ ಕಾನೂನು ಬಲ : ಕೃಷಿಯಲ್ಲಿ ಗುಣಮಟ್ಟದ ಬೀಜ ಬಳಕೆ ಹಾಗೂ ಸುರಕ್ಷಿತ ಕೀಟನಾಶಕಗಳ ನಿಯಂತ್ರಣದ ಮೂಲಕ ರೈತರ ಉತ್ಪಾದಕತೆ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. ಹೊಸ ಕಾಯ್ದೆಗಳ ಮೂಲಕ ನಕಲಿ ಬೀಜ, ಹಾನಿಕಾರಕ ರಾಸಾಯನಿಕಗಳ ಬಳಕೆಯನ್ನು ನಿಯಂತ್ರಿಸಿ ರೈತರಿಗೆ ನ್ಯಾಯಸಮ್ಮತ ವ್ಯವಸ್ಥೆ ಒದಗಿಸುವ ಗುರಿ ಹೊಂದಲಾಗಿದೆ.
ಸರ್ಕಾರವು ಪ್ರಮುಖ ಡಿಜಿಟಲ್ ವೇದಿಕೆಯನ್ನು ನವೀಕರಿಸುತ್ತಿದ್ದು, ‘ಏಕ ಭಾರತ್’ ಉಪಕ್ರಮದಡಿ ಕೃತಕ ಬುದ್ಧಿಮತ್ತೆ (AI) ಆಧಾರಿತ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ. ಇದರ ಮೂಲಕ ರೈತರು ಬೆಳೆ ಮಾಹಿತಿ, ಮಾರುಕಟ್ಟೆ ಧಾರಣೆ, ಹವಾಮಾನ ಮುನ್ಸೂಚನೆ, ಸರಕಾರದ ಯೋಜನೆಗಳ ಮಾಹಿತಿ ಸೇರಿದಂತೆ ಎಲ್ಲ ಅಗತ್ಯ ಮಾಹಿತಿಯನ್ನು ಒಂದೇ ಸ್ಥಳದಲ್ಲಿ ಪಡೆಯಲು ಅನುಕೂಲವಾಗಲಿದೆ.
ಇಂದು ದೇಶದಲ್ಲಿ ಕೃಷಿ ಉತ್ಪಾದನೆ ಹೆಚ್ಚುತ್ತಿದ್ದು, ರೈತರ ಆದಾಯದಲ್ಲೂ ಸುಧಾರಣೆ ಕಾಣುತ್ತಿದೆ. ತಂತ್ರಜ್ಞಾನ ಮತ್ತು ಬಲವಾದ ಕಾನೂನಿನ ಮೂಲಕ ರೈತರನ್ನು ಇನ್ನಷ್ಟು ಸಬಲೀಕರಣಗೊಳಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಸಚಿವರು ಹೇಳಿದರು.
Union Agriculture Minister Shivraj Singh Chouhan announced that the central government is preparing to implement two major reforms — a New Seed Act and an amended Pesticide Act — to strengthen farmers’ interests. He also highlighted the development of an AI-based digital platform under the ‘Ek Bharat’ initiative to provide farmers with integrated access to essential agricultural information.
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…
ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್ 3 ರವರೆಗೆ ಮಳೆಯ ಸಾಧ್ಯತೆ…
ವಾಣಿ ವಿಲಾಸ ಸಾಗರ ಜಲಾಶಯದ ಸಮೀಪದಲ್ಲೇ ಹಿರಿಯೂರಿನ ಅಡಿಕೆ ರೈತರು ನೀರಿನ ಕೊರತೆಯಿಂದ…
ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಪ್ರಾಣಿ–ಮಾನವ ಸಂಘರ್ಷ ಸಮಸ್ಯೆಗೆ…