ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ

December 9, 2024
7:15 AM

ಸೈಬರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. 

Advertisement

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಅಪರಾಧಗಳ ಸ್ವರೂಪ ಬದಲಾಗಿದೆ. ದೇಶ ಅಥವಾ ವಿದೇಶದ ಯಾವುದೇ ಮೂಲೆಯಲ್ಲಿ ಕುಳಿತು ಮೋಸ ಮಾಡಬಹುದು. ಸೈಬರ್ ಮೂಲಕ ಅನೇಕ ರೀತಿಯ ವಂಚನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯ ತರಬೇತಿ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬದಲಾವಣೆ ಮಾಡಲಾಗಿದೆ. ತಂತ್ರಜ್ಞಾನಗಳ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ. ಎಂದರು. ವಂಚಕರು ಅಪರಾಧ ಮಾಡುವ ವಿಧಾನಗಳನ್ನು ಬದಲಾವಣೆ ಮಾಡಿಕೊಳ್ಳುತ್ತಾ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯ ಕಚೇರಿಯ ಸಂಖ್ಯೆಯಿಂದಲೇ ವಿಪಿಎನ್ ತಂತ್ರಜ್ಞಾನ ಬಳಕೆ ಮಾಡಿ ಕರೆ ಮಾಡಿ ವಂಚನೆ ಮಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಜನರು ಜಾಗೃತರಾಗಬೇಕು. ಹೊಸ ತಂತ್ರಜ್ಞಾನಗಳನ್ನು ವಂಚಕರು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಡಿಜಿಪಿ ತಿಳಿಸಿದರು.

 

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆ ರಜೆ ಹಿನ್ನೆಲೆ | ಮುಂಬೈನಿಂದ ಬೆಂಗಳೂರಿಗೆ ವಿಶೇಷ ರೈಲು ಸೇವೆ
March 28, 2025
7:00 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಕುಡಿಯುವ ನೀರಿನ  ಅಭಾವ ನೀಗಿಸಲು ಸರ್ಕಾರದಿಂದ ಸಮಿತಿ ರಚನೆ
March 28, 2025
6:30 AM
by: The Rural Mirror ಸುದ್ದಿಜಾಲ
ಒಂದು ವರ್ಷದ ನಂತರ 8 ರಾಶಿಗಳಿಗೆ ಆರ್ಥಿಕ ಬಲ
March 28, 2025
6:23 AM
by: ದ ರೂರಲ್ ಮಿರರ್.ಕಾಂ
ಹಾಸನ | ಕಾಡಾನೆ ಪತ್ತೆಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ಯಶಸ್ವಿ
March 28, 2025
5:53 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group