ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ

December 9, 2024
7:15 AM

ಸೈಬರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. 

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಅಪರಾಧಗಳ ಸ್ವರೂಪ ಬದಲಾಗಿದೆ. ದೇಶ ಅಥವಾ ವಿದೇಶದ ಯಾವುದೇ ಮೂಲೆಯಲ್ಲಿ ಕುಳಿತು ಮೋಸ ಮಾಡಬಹುದು. ಸೈಬರ್ ಮೂಲಕ ಅನೇಕ ರೀತಿಯ ವಂಚನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯ ತರಬೇತಿ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬದಲಾವಣೆ ಮಾಡಲಾಗಿದೆ. ತಂತ್ರಜ್ಞಾನಗಳ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ. ಎಂದರು. ವಂಚಕರು ಅಪರಾಧ ಮಾಡುವ ವಿಧಾನಗಳನ್ನು ಬದಲಾವಣೆ ಮಾಡಿಕೊಳ್ಳುತ್ತಾ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯ ಕಚೇರಿಯ ಸಂಖ್ಯೆಯಿಂದಲೇ ವಿಪಿಎನ್ ತಂತ್ರಜ್ಞಾನ ಬಳಕೆ ಮಾಡಿ ಕರೆ ಮಾಡಿ ವಂಚನೆ ಮಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಜನರು ಜಾಗೃತರಾಗಬೇಕು. ಹೊಸ ತಂತ್ರಜ್ಞಾನಗಳನ್ನು ವಂಚಕರು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಡಿಜಿಪಿ ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ
ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ
May 12, 2026
7:37 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 11-05-2026 | ವಾಯುಭಾರ ಕುಸಿತದ ಲಕ್ಷಣ…? – ಸದ್ಯ ಗುಡುಗು ಮಳೆ ಮುಂದುವರಿಕೆ – ಕರಾವಳಿ-ಮಲೆನಾಡಿನಲ್ಲಿ ಸಂಜೆ ಮಳೆಯ ಅಬ್ಬರ ಸಾಧ್ಯ
May 11, 2026
2:25 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror