ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ

December 9, 2024
7:15 AM

ಸೈಬರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. 

ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಅಪರಾಧಗಳ ಸ್ವರೂಪ ಬದಲಾಗಿದೆ. ದೇಶ ಅಥವಾ ವಿದೇಶದ ಯಾವುದೇ ಮೂಲೆಯಲ್ಲಿ ಕುಳಿತು ಮೋಸ ಮಾಡಬಹುದು. ಸೈಬರ್ ಮೂಲಕ ಅನೇಕ ರೀತಿಯ ವಂಚನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯ ತರಬೇತಿ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬದಲಾವಣೆ ಮಾಡಲಾಗಿದೆ. ತಂತ್ರಜ್ಞಾನಗಳ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ. ಎಂದರು. ವಂಚಕರು ಅಪರಾಧ ಮಾಡುವ ವಿಧಾನಗಳನ್ನು ಬದಲಾವಣೆ ಮಾಡಿಕೊಳ್ಳುತ್ತಾ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯ ಕಚೇರಿಯ ಸಂಖ್ಯೆಯಿಂದಲೇ ವಿಪಿಎನ್ ತಂತ್ರಜ್ಞಾನ ಬಳಕೆ ಮಾಡಿ ಕರೆ ಮಾಡಿ ವಂಚನೆ ಮಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಜನರು ಜಾಗೃತರಾಗಬೇಕು. ಹೊಸ ತಂತ್ರಜ್ಞಾನಗಳನ್ನು ವಂಚಕರು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಡಿಜಿಪಿ ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror