ಹೊಸ ಭತ್ತದ ತಳಿ ಪತ್ತೆಹಚ್ಚಿ ಪೇಟೆಂಟ್ ಪಡೆದ ರೈತ !

March 25, 2022
10:41 PM

ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್‌ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್‌ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ.  ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.

ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್‌ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್‌ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂಗಾರು ಆರಂಭ ಭರವಸೆ ಮೂಡಿಸಿದರೂ ಎಲ್‌ನಿನೊ ಆತಂಕ…! 2026 ರ ಮಳೆಯ ಭವಿಷ್ಯ ನಿರ್ಧರಿಸುವ ಹವಾಮಾನ ಸಂಕೇತಗಳೇನು?
June 10, 2026
6:47 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ
June 10, 2026
6:32 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ
June 9, 2026
11:58 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror