ಹೊಸ ಭತ್ತದ ತಳಿ ಪತ್ತೆಹಚ್ಚಿ ಪೇಟೆಂಟ್ ಪಡೆದ ರೈತ !

March 25, 2022
10:41 PM

ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್‌ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್‌ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ.  ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.

ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್‌ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್‌ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror