ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ. ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.
ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.
ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…