ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ. ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.
ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.
ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…