ಕೃಷಿ

ಹೊಸ ಭತ್ತದ ತಳಿ ಪತ್ತೆಹಚ್ಚಿ ಪೇಟೆಂಟ್ ಪಡೆದ ರೈತ !

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್‌ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್‌ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ.  ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.

Advertisement
Advertisement

ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್‌ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್‌ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

1 hour ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

1 hour ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

12 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

12 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

12 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

12 hours ago