Advertisement
ಕೃಷಿ

ಹೊಸ ಭತ್ತದ ತಳಿ ಪತ್ತೆಹಚ್ಚಿ ಪೇಟೆಂಟ್ ಪಡೆದ ರೈತ !

Share

ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್‌ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್‌ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ.  ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.

ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್‌ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್‌ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

1 hour ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

3 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

8 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

11 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

11 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago