ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ. ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.
ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.
ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…