Advertisement
ಕೃಷಿ

ಹೊಸ ಭತ್ತದ ತಳಿ ಪತ್ತೆಹಚ್ಚಿ ಪೇಟೆಂಟ್ ಪಡೆದ ರೈತ !

Share

ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್‌ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್‌ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ.  ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.

ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್‌ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್‌ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

6 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

7 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

16 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

17 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

17 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

21 hours ago