Advertisement
ಕೃಷಿ

ಹೊಸ ಭತ್ತದ ತಳಿ ಪತ್ತೆಹಚ್ಚಿ ಪೇಟೆಂಟ್ ಪಡೆದ ರೈತ !

Share

ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್‌ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್‌ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ.  ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.

ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್‌ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್‌ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

46 minutes ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 hour ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

8 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

13 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 day ago