ಮೈಸೂರಿನ ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದ ಶಂಕರ್ ಗುರು ಅವರು ಭತ್ತದ ಬೀಜ ಸಂಗ್ರಹಣೆ ಮಾಡಿ, ಹೊಸ ತಳಿಯನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಎನ್ಎಂಎಸ್ -2 ತಳಿ ಎಂದು ಅವರೇ ಹೆಸರನ್ನೂ ಇಟ್ಟಿದ್ದಾರೆ. ಈ ಎನ್ಎಂಎಸ್ -2 ಭತ್ತದ ತಳಿಯಿಂದ ಪ್ರತಿ ಎಕರೆಗೆ 32 ಕ್ವಿಂಟಾಲ್ ಭತ್ತವನ್ನು ಬೆಳೆಯಬಹುದಾಗಿದೆ. ಈ ಹಿನ್ನೆಲೆ ಇವರಿಗೆ ಭಾರತ ಸರ್ಕಾರದಿಂದ ಪೇಟೆಂಟ್ ಹಕ್ಕನ್ನು ನೀಡಲಾಗಿದೆ.
ಹೊಸ ತಳಿ ಭತ್ತವನ್ನು ಬೆಳೆದಾಗ ಮಾರುಕಟ್ಟೆಯಲ್ಲಿ ಕೆಲವೊಮ್ಮೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ ನಾವು ಈ ಬಿತ್ತನೆ ಭತ್ತವನ್ನು ಗ್ರಾಂ ಲೆಕ್ಕದಲ್ಲಿ ನೀಡುತ್ತೇವೆ, ಕ್ವಿಂಟಾಲ್ಗಟ್ಟಲೆ ನೀಡಿದರೆ ಅದನ್ನು ಬೆಳೆದು ಬೆಂಬಲ ಬೆಲೆ ದೊರೆಯದಿದ್ದರೆ ನಮಗೆ ಕಷ್ಟವಾಗುತ್ತದೆ ಎಂದಿದ್ದಾರೆ.
ಇದು ವಿಭಿನ್ನ ಗುಣಲಕ್ಷಣ ಹೊಂದಿದ್ದು, ಉತ್ತಮವಾದ ತೆನೆ, ಹುಲ್ಲು, ರೋಗ ರಹಿತ ಗುಣಗಳಿರುವ ಈ ತಳಿಯನ್ನು ಸತತ ಏಳು ವರ್ಷ ಅಧ್ಯಯನ ನಡೆಸಿ ಎಲ್ಲಾ ಹವಾಮಾನಗಳಿಗೆ ಹೊಂದಾಣಿಕೆಯಾಗುವಂತೆ ಅಭಿವೃದ್ಧಿಪಡಿಸಲಾಗಿದೆ. ಭತ್ತದ ಹಿಡುವಳಿಯ ಜೊತೆಗೆ ಹುಲ್ಲು ಕೂಡ ಚೆನ್ನಾಗಿ ಬರುತ್ತದೆ.ಶಂಕರ್ ಗುರು ಅವರಿಗೆ ಎನ್ಎಂಎಸ್ -2 ಸ್ಥಳೀಯ ಅಭಿವೃದ್ಧಿಗಾಗಿ ನ್ಯಾಷನಲ್ ಇನ್ನೋವೇಶನ್ ಅವಾರ್ಡ್, ದೇಸಿ ಅಕ್ಕಿ ಮೇಳದಲ್ಲಿ 2011ರಲ್ಲಿ ರೈತ ವಿಜ್ಞಾನಿ ಪ್ರಶಸ್ತಿ ಕೂಡ ಲಭಿಸಿದೆ.
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…