Advertisement
ಅಂಕಣ

2022 | ಹೊಸವರ್ಷದ ಶುಭಾಶಯಗಳು | ಸಂತಸದತ್ತ ಮುಖಮಾಡೋಣ |

Share

ಡಿಸೆಂಬರ್ ಬರುತ್ತಿದ್ದಂತೆ ಬೀದಿ ಬೀದಿಗಳು ಕಳೆಗಟ್ಟುವುದು, ವಿದ್ಯುತ್ ದೀಪಗಳಿಂದ ಅಲಂಕರಿಸ್ಪಡುವುದು, ಸುಂದರವಾದ ಕ್ರಿಸ್ ಮಸ್ ಟ್ರೀ ಗಳು, ತಯಾರಿ ಹಂತದಲ್ಲಿರುವ ನಮೂನೆವಾರು ಕೇಕ್ ಗಳು . ಪ್ರತಿ ವರ್ಷ ಡಿಸೆಂಬರ್ ಇಪ್ಪತೈದರ ಕ್ರಿಸ್ಮಸ್ ಹಬ್ಬ ಮುಗಿಯುವುದು ಜನವರಿ ಒಂದರ ಆರಂಭದೊಂದಿಗೆ.

Advertisement
Advertisement
Advertisement
Advertisement

ವರ್ಷದ ಕೊನೆಯ ತಿಂಗಳು ಆರಂಭವಾತ್ತಿರುವಂತೆ ವಿದೇಶದಲ್ಲಿ ನೆಲೆಸಿರುವ ಬಂಧು ಬಳಗ, ಮಿತ್ರರು ಕಳುಹಿಸುವ ಅಲ್ಲಿನ ಛಾಯಾಚಿತ್ರಗಳನ್ನು ನೋಡುವುದೇ ಸಂಭ್ರಮ. ಒಂದೊಂದು ಕಡೆ ಒಂದೊಂದು ಬಗೆಯ ಆಚರಣೆ. ಕ್ಯಾಲೆಂಡರ್ ವರ್ಷಾಚರಣೆಗೆ ಇತ್ತೀಚೆಗೆ ನಮ್ಮಲ್ಲೂ ಬಹಳ ಸಂಭ್ರಮ ಪಡುತ್ತೇವೆ. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವುದು , ಉಡುಗೊರೆ ಕೊಡುವುದು, ಚಾಕಲೇಟ್, ಸಿಹಿ ಹಂಚುವುದು ಎಲ್ಲಾ ಇದ್ದದ್ದೇ ಅಲ್ಲವೇ . ಇವಕ್ಕೆ ಒಂದು ಕಾರಣ ಬೇಕಷ್ಟೇ!2020 ಹಾಗೂ 2021 ಬಹಳ ನೆನಪಿನಲ್ಲಿ ಉಳಿಯುವ ವರ್ಷಗಳು. ಖುಷಿಯ ವಿಚಾರಕ್ಕಿಂತ ದುರಂತ ವರ್ಷಗಳೇ ಅನ್ನಬಹುದು.

Advertisement

ಅಲ್ಲಾ ಬದಲಾವಣೆ ಜಗದ ನಿಯಮ ಸರಿ, ಆದರೆ ಈ ಪರಿಯ ಬದಲಾವಣೆ?!?!.. ನೈಸರ್ಗಿಕ ಅವಘಡಗಳು ನಿತ್ಯವೆಂಬಂತೆ ನಡೆಯುತ್ತಿವೆ. ಮಳೆಯ ಸ್ವರೂಪ ಬದಲಾಗುತ್ತಿದೆ. ಪರಿಸರದಲ್ಲಿನ ಕಾಯಿಲೆಗಳ ತೀವ್ರತೆ , ಬಾಧಿಸುವ ವ್ಯಾಪ್ತಿ ದಿನದಿಂದ ದಿನಕ್ಕೆ ಬೇರೆ ಬೇರೆಯೇ. ಒಬ್ಬನಿಂದ ಇನ್ನೊಬ್ಬನಿಗೆ ಹರಡುವ , ಆಮೇಲಿನ ಪ್ರಭಾವ ಎಲ್ಲವೂ ವಿಭಿನ್ನ. ಎಲ್ಲವೂ ಆಯೋಮಯವೆನಿಸುತ್ತಿದೆ. ಈ ಕಷ್ಟ, ಸಂಕಷ್ಟ, ಬೇಸರಿಕೆ,ನೋವು ,ನಷ್ಟಗಳ ಭಾವನೆಗಳೆಲ್ಲವನ್ನು ಒಂದು ಗಂಟು ಮಾಡಿ ಬದಿಯಲ್ಲಿರಿಸೋಣ. ಮನಸನ್ನು ಹೊಸ ವರುಷದ ಸ್ವಾಗತಕ್ಕೆ ಸಿದ್ಧಗೊಳಿಸೋಣ.

Advertisement

Advertisement

2022 ದೇಶಕ್ಕೆ ಹಿತವನ್ನೇ ನೀಡಲಿ. ಅಭಿವೃದ್ಧಿಯ ಪಥದಲ್ಲಿ ದಿಟ್ಟ ಹೆಜ್ಜೆಗಳೊಂದಿಗೆ ಮುನ್ನಡೆಯಲಿ. ಮನಸಿನ ಸ್ವಾರ್ಥ, ಲೋಭ, ಹೊಟ್ಟೆಗಿಚ್ಚು ಬದಿಗಿಟ್ಟು ದೇಶಹಿತವೇ ಮುಖ್ಯವಾಗಲಿ . ಉಲ್ಲಾಸಕರವಾಗಿ ಮನಮನದಲ್ಲಿ ಸಂತಸವೇ ತುಂಬಿರಲಿ.‌ ಹೊಸ ವರುಷದ ಶುಭಾಶಯಗಳು.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

25 mins ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

1 hour ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

10 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

11 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

11 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago