Advertisement
ಅನುಕ್ರಮ

2022 | ಹೊಸವರ್ಷದ ಶುಭಾಶಯಗಳು | ಸಂತಸದತ್ತ ಮುಖಮಾಡೋಣ |

Share

ಡಿಸೆಂಬರ್ ಬರುತ್ತಿದ್ದಂತೆ ಬೀದಿ ಬೀದಿಗಳು ಕಳೆಗಟ್ಟುವುದು, ವಿದ್ಯುತ್ ದೀಪಗಳಿಂದ ಅಲಂಕರಿಸ್ಪಡುವುದು, ಸುಂದರವಾದ ಕ್ರಿಸ್ ಮಸ್ ಟ್ರೀ ಗಳು, ತಯಾರಿ ಹಂತದಲ್ಲಿರುವ ನಮೂನೆವಾರು ಕೇಕ್ ಗಳು . ಪ್ರತಿ ವರ್ಷ ಡಿಸೆಂಬರ್ ಇಪ್ಪತೈದರ ಕ್ರಿಸ್ಮಸ್ ಹಬ್ಬ ಮುಗಿಯುವುದು ಜನವರಿ ಒಂದರ ಆರಂಭದೊಂದಿಗೆ.

ವರ್ಷದ ಕೊನೆಯ ತಿಂಗಳು ಆರಂಭವಾತ್ತಿರುವಂತೆ ವಿದೇಶದಲ್ಲಿ ನೆಲೆಸಿರುವ ಬಂಧು ಬಳಗ, ಮಿತ್ರರು ಕಳುಹಿಸುವ ಅಲ್ಲಿನ ಛಾಯಾಚಿತ್ರಗಳನ್ನು ನೋಡುವುದೇ ಸಂಭ್ರಮ. ಒಂದೊಂದು ಕಡೆ ಒಂದೊಂದು ಬಗೆಯ ಆಚರಣೆ. ಕ್ಯಾಲೆಂಡರ್ ವರ್ಷಾಚರಣೆಗೆ ಇತ್ತೀಚೆಗೆ ನಮ್ಮಲ್ಲೂ ಬಹಳ ಸಂಭ್ರಮ ಪಡುತ್ತೇವೆ. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವುದು , ಉಡುಗೊರೆ ಕೊಡುವುದು, ಚಾಕಲೇಟ್, ಸಿಹಿ ಹಂಚುವುದು ಎಲ್ಲಾ ಇದ್ದದ್ದೇ ಅಲ್ಲವೇ . ಇವಕ್ಕೆ ಒಂದು ಕಾರಣ ಬೇಕಷ್ಟೇ!2020 ಹಾಗೂ 2021 ಬಹಳ ನೆನಪಿನಲ್ಲಿ ಉಳಿಯುವ ವರ್ಷಗಳು. ಖುಷಿಯ ವಿಚಾರಕ್ಕಿಂತ ದುರಂತ ವರ್ಷಗಳೇ ಅನ್ನಬಹುದು.

ಅಲ್ಲಾ ಬದಲಾವಣೆ ಜಗದ ನಿಯಮ ಸರಿ, ಆದರೆ ಈ ಪರಿಯ ಬದಲಾವಣೆ?!?!.. ನೈಸರ್ಗಿಕ ಅವಘಡಗಳು ನಿತ್ಯವೆಂಬಂತೆ ನಡೆಯುತ್ತಿವೆ. ಮಳೆಯ ಸ್ವರೂಪ ಬದಲಾಗುತ್ತಿದೆ. ಪರಿಸರದಲ್ಲಿನ ಕಾಯಿಲೆಗಳ ತೀವ್ರತೆ , ಬಾಧಿಸುವ ವ್ಯಾಪ್ತಿ ದಿನದಿಂದ ದಿನಕ್ಕೆ ಬೇರೆ ಬೇರೆಯೇ. ಒಬ್ಬನಿಂದ ಇನ್ನೊಬ್ಬನಿಗೆ ಹರಡುವ , ಆಮೇಲಿನ ಪ್ರಭಾವ ಎಲ್ಲವೂ ವಿಭಿನ್ನ. ಎಲ್ಲವೂ ಆಯೋಮಯವೆನಿಸುತ್ತಿದೆ. ಈ ಕಷ್ಟ, ಸಂಕಷ್ಟ, ಬೇಸರಿಕೆ,ನೋವು ,ನಷ್ಟಗಳ ಭಾವನೆಗಳೆಲ್ಲವನ್ನು ಒಂದು ಗಂಟು ಮಾಡಿ ಬದಿಯಲ್ಲಿರಿಸೋಣ. ಮನಸನ್ನು ಹೊಸ ವರುಷದ ಸ್ವಾಗತಕ್ಕೆ ಸಿದ್ಧಗೊಳಿಸೋಣ.

2022 ದೇಶಕ್ಕೆ ಹಿತವನ್ನೇ ನೀಡಲಿ. ಅಭಿವೃದ್ಧಿಯ ಪಥದಲ್ಲಿ ದಿಟ್ಟ ಹೆಜ್ಜೆಗಳೊಂದಿಗೆ ಮುನ್ನಡೆಯಲಿ. ಮನಸಿನ ಸ್ವಾರ್ಥ, ಲೋಭ, ಹೊಟ್ಟೆಗಿಚ್ಚು ಬದಿಗಿಟ್ಟು ದೇಶಹಿತವೇ ಮುಖ್ಯವಾಗಲಿ . ಉಲ್ಲಾಸಕರವಾಗಿ ಮನಮನದಲ್ಲಿ ಸಂತಸವೇ ತುಂಬಿರಲಿ.‌ ಹೊಸ ವರುಷದ ಶುಭಾಶಯಗಳು.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

8 hours ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

8 hours ago

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

1 day ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

1 day ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

1 day ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

2 days ago