Advertisement
ಅನುಕ್ರಮ

2022 | ಹೊಸವರ್ಷದ ಶುಭಾಶಯಗಳು | ಸಂತಸದತ್ತ ಮುಖಮಾಡೋಣ |

Share

ಡಿಸೆಂಬರ್ ಬರುತ್ತಿದ್ದಂತೆ ಬೀದಿ ಬೀದಿಗಳು ಕಳೆಗಟ್ಟುವುದು, ವಿದ್ಯುತ್ ದೀಪಗಳಿಂದ ಅಲಂಕರಿಸ್ಪಡುವುದು, ಸುಂದರವಾದ ಕ್ರಿಸ್ ಮಸ್ ಟ್ರೀ ಗಳು, ತಯಾರಿ ಹಂತದಲ್ಲಿರುವ ನಮೂನೆವಾರು ಕೇಕ್ ಗಳು . ಪ್ರತಿ ವರ್ಷ ಡಿಸೆಂಬರ್ ಇಪ್ಪತೈದರ ಕ್ರಿಸ್ಮಸ್ ಹಬ್ಬ ಮುಗಿಯುವುದು ಜನವರಿ ಒಂದರ ಆರಂಭದೊಂದಿಗೆ.

ವರ್ಷದ ಕೊನೆಯ ತಿಂಗಳು ಆರಂಭವಾತ್ತಿರುವಂತೆ ವಿದೇಶದಲ್ಲಿ ನೆಲೆಸಿರುವ ಬಂಧು ಬಳಗ, ಮಿತ್ರರು ಕಳುಹಿಸುವ ಅಲ್ಲಿನ ಛಾಯಾಚಿತ್ರಗಳನ್ನು ನೋಡುವುದೇ ಸಂಭ್ರಮ. ಒಂದೊಂದು ಕಡೆ ಒಂದೊಂದು ಬಗೆಯ ಆಚರಣೆ. ಕ್ಯಾಲೆಂಡರ್ ವರ್ಷಾಚರಣೆಗೆ ಇತ್ತೀಚೆಗೆ ನಮ್ಮಲ್ಲೂ ಬಹಳ ಸಂಭ್ರಮ ಪಡುತ್ತೇವೆ. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವುದು , ಉಡುಗೊರೆ ಕೊಡುವುದು, ಚಾಕಲೇಟ್, ಸಿಹಿ ಹಂಚುವುದು ಎಲ್ಲಾ ಇದ್ದದ್ದೇ ಅಲ್ಲವೇ . ಇವಕ್ಕೆ ಒಂದು ಕಾರಣ ಬೇಕಷ್ಟೇ!2020 ಹಾಗೂ 2021 ಬಹಳ ನೆನಪಿನಲ್ಲಿ ಉಳಿಯುವ ವರ್ಷಗಳು. ಖುಷಿಯ ವಿಚಾರಕ್ಕಿಂತ ದುರಂತ ವರ್ಷಗಳೇ ಅನ್ನಬಹುದು.

ಅಲ್ಲಾ ಬದಲಾವಣೆ ಜಗದ ನಿಯಮ ಸರಿ, ಆದರೆ ಈ ಪರಿಯ ಬದಲಾವಣೆ?!?!.. ನೈಸರ್ಗಿಕ ಅವಘಡಗಳು ನಿತ್ಯವೆಂಬಂತೆ ನಡೆಯುತ್ತಿವೆ. ಮಳೆಯ ಸ್ವರೂಪ ಬದಲಾಗುತ್ತಿದೆ. ಪರಿಸರದಲ್ಲಿನ ಕಾಯಿಲೆಗಳ ತೀವ್ರತೆ , ಬಾಧಿಸುವ ವ್ಯಾಪ್ತಿ ದಿನದಿಂದ ದಿನಕ್ಕೆ ಬೇರೆ ಬೇರೆಯೇ. ಒಬ್ಬನಿಂದ ಇನ್ನೊಬ್ಬನಿಗೆ ಹರಡುವ , ಆಮೇಲಿನ ಪ್ರಭಾವ ಎಲ್ಲವೂ ವಿಭಿನ್ನ. ಎಲ್ಲವೂ ಆಯೋಮಯವೆನಿಸುತ್ತಿದೆ. ಈ ಕಷ್ಟ, ಸಂಕಷ್ಟ, ಬೇಸರಿಕೆ,ನೋವು ,ನಷ್ಟಗಳ ಭಾವನೆಗಳೆಲ್ಲವನ್ನು ಒಂದು ಗಂಟು ಮಾಡಿ ಬದಿಯಲ್ಲಿರಿಸೋಣ. ಮನಸನ್ನು ಹೊಸ ವರುಷದ ಸ್ವಾಗತಕ್ಕೆ ಸಿದ್ಧಗೊಳಿಸೋಣ.

2022 ದೇಶಕ್ಕೆ ಹಿತವನ್ನೇ ನೀಡಲಿ. ಅಭಿವೃದ್ಧಿಯ ಪಥದಲ್ಲಿ ದಿಟ್ಟ ಹೆಜ್ಜೆಗಳೊಂದಿಗೆ ಮುನ್ನಡೆಯಲಿ. ಮನಸಿನ ಸ್ವಾರ್ಥ, ಲೋಭ, ಹೊಟ್ಟೆಗಿಚ್ಚು ಬದಿಗಿಟ್ಟು ದೇಶಹಿತವೇ ಮುಖ್ಯವಾಗಲಿ . ಉಲ್ಲಾಸಕರವಾಗಿ ಮನಮನದಲ್ಲಿ ಸಂತಸವೇ ತುಂಬಿರಲಿ.‌ ಹೊಸ ವರುಷದ ಶುಭಾಶಯಗಳು.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

3 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

4 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

10 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

16 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago