Advertisement
ಅನುಕ್ರಮ

2022 | ಹೊಸವರ್ಷದ ಶುಭಾಶಯಗಳು | ಸಂತಸದತ್ತ ಮುಖಮಾಡೋಣ |

Share

ಡಿಸೆಂಬರ್ ಬರುತ್ತಿದ್ದಂತೆ ಬೀದಿ ಬೀದಿಗಳು ಕಳೆಗಟ್ಟುವುದು, ವಿದ್ಯುತ್ ದೀಪಗಳಿಂದ ಅಲಂಕರಿಸ್ಪಡುವುದು, ಸುಂದರವಾದ ಕ್ರಿಸ್ ಮಸ್ ಟ್ರೀ ಗಳು, ತಯಾರಿ ಹಂತದಲ್ಲಿರುವ ನಮೂನೆವಾರು ಕೇಕ್ ಗಳು . ಪ್ರತಿ ವರ್ಷ ಡಿಸೆಂಬರ್ ಇಪ್ಪತೈದರ ಕ್ರಿಸ್ಮಸ್ ಹಬ್ಬ ಮುಗಿಯುವುದು ಜನವರಿ ಒಂದರ ಆರಂಭದೊಂದಿಗೆ.

ವರ್ಷದ ಕೊನೆಯ ತಿಂಗಳು ಆರಂಭವಾತ್ತಿರುವಂತೆ ವಿದೇಶದಲ್ಲಿ ನೆಲೆಸಿರುವ ಬಂಧು ಬಳಗ, ಮಿತ್ರರು ಕಳುಹಿಸುವ ಅಲ್ಲಿನ ಛಾಯಾಚಿತ್ರಗಳನ್ನು ನೋಡುವುದೇ ಸಂಭ್ರಮ. ಒಂದೊಂದು ಕಡೆ ಒಂದೊಂದು ಬಗೆಯ ಆಚರಣೆ. ಕ್ಯಾಲೆಂಡರ್ ವರ್ಷಾಚರಣೆಗೆ ಇತ್ತೀಚೆಗೆ ನಮ್ಮಲ್ಲೂ ಬಹಳ ಸಂಭ್ರಮ ಪಡುತ್ತೇವೆ. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವುದು , ಉಡುಗೊರೆ ಕೊಡುವುದು, ಚಾಕಲೇಟ್, ಸಿಹಿ ಹಂಚುವುದು ಎಲ್ಲಾ ಇದ್ದದ್ದೇ ಅಲ್ಲವೇ . ಇವಕ್ಕೆ ಒಂದು ಕಾರಣ ಬೇಕಷ್ಟೇ!2020 ಹಾಗೂ 2021 ಬಹಳ ನೆನಪಿನಲ್ಲಿ ಉಳಿಯುವ ವರ್ಷಗಳು. ಖುಷಿಯ ವಿಚಾರಕ್ಕಿಂತ ದುರಂತ ವರ್ಷಗಳೇ ಅನ್ನಬಹುದು.

ಅಲ್ಲಾ ಬದಲಾವಣೆ ಜಗದ ನಿಯಮ ಸರಿ, ಆದರೆ ಈ ಪರಿಯ ಬದಲಾವಣೆ?!?!.. ನೈಸರ್ಗಿಕ ಅವಘಡಗಳು ನಿತ್ಯವೆಂಬಂತೆ ನಡೆಯುತ್ತಿವೆ. ಮಳೆಯ ಸ್ವರೂಪ ಬದಲಾಗುತ್ತಿದೆ. ಪರಿಸರದಲ್ಲಿನ ಕಾಯಿಲೆಗಳ ತೀವ್ರತೆ , ಬಾಧಿಸುವ ವ್ಯಾಪ್ತಿ ದಿನದಿಂದ ದಿನಕ್ಕೆ ಬೇರೆ ಬೇರೆಯೇ. ಒಬ್ಬನಿಂದ ಇನ್ನೊಬ್ಬನಿಗೆ ಹರಡುವ , ಆಮೇಲಿನ ಪ್ರಭಾವ ಎಲ್ಲವೂ ವಿಭಿನ್ನ. ಎಲ್ಲವೂ ಆಯೋಮಯವೆನಿಸುತ್ತಿದೆ. ಈ ಕಷ್ಟ, ಸಂಕಷ್ಟ, ಬೇಸರಿಕೆ,ನೋವು ,ನಷ್ಟಗಳ ಭಾವನೆಗಳೆಲ್ಲವನ್ನು ಒಂದು ಗಂಟು ಮಾಡಿ ಬದಿಯಲ್ಲಿರಿಸೋಣ. ಮನಸನ್ನು ಹೊಸ ವರುಷದ ಸ್ವಾಗತಕ್ಕೆ ಸಿದ್ಧಗೊಳಿಸೋಣ.

2022 ದೇಶಕ್ಕೆ ಹಿತವನ್ನೇ ನೀಡಲಿ. ಅಭಿವೃದ್ಧಿಯ ಪಥದಲ್ಲಿ ದಿಟ್ಟ ಹೆಜ್ಜೆಗಳೊಂದಿಗೆ ಮುನ್ನಡೆಯಲಿ. ಮನಸಿನ ಸ್ವಾರ್ಥ, ಲೋಭ, ಹೊಟ್ಟೆಗಿಚ್ಚು ಬದಿಗಿಟ್ಟು ದೇಶಹಿತವೇ ಮುಖ್ಯವಾಗಲಿ . ಉಲ್ಲಾಸಕರವಾಗಿ ಮನಮನದಲ್ಲಿ ಸಂತಸವೇ ತುಂಬಿರಲಿ.‌ ಹೊಸ ವರುಷದ ಶುಭಾಶಯಗಳು.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

7 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

17 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

18 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

18 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

24 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago